Breaking News

ಬೆಳಗಾವಿ ಎಂಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಫಿಕ್ಸ?

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಲಕ್ಷಕ್ಕೂ ಅಧಿಕ ಮತ ಪಡೆದು ಕಾಂಗ್ರೆಸ್ ಪಕ್ಷದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿರುವ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರಿಗೆ ಬೆಳಗಾವಿ ಎಂಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಕ್ಷದ ನಾಯಕರು ನಿರ್ಧಾರ ಮಾಡಿದ್ದಾರೆ

ಬೆಳಗಾವಿ ಜಿಲ್ಲೆಯಿಂದ ಸೋತಿರುವ ಕಾಂಗ್ರೆಸ್ ಅಭ್ಯರ್ಥಿಗಳು ಎಂಪಿ ಟಿಕೆಟ್ ಗಾಗಿ ಕಸರತ್ತು ನಡೆಸಿದ್ದು ಹೆಬ್ಬಾಳಕರ ಗೆಲುವಿಗೆ ತೆರೆ ಮರೆಯಲ್ಲಿ ಶ್ರಮುಸಿದ ಸಂಘಟನಾ ಚತುರ ಚನ್ನರಾಜ ಹಟ್ಟಿಹೊಳಿ ಅವರಿಗೆ ಬೆಳಗಾವಿ ಎಂಪಿ ಟಿಕೆಟ್ ನೀಡಲು ಸಿದ್ರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎಂದು ತಿಳುದು ಬಂದಿದೆ
ಈ ಕುರಿತು ಚನ್ಬರಾಜ ಹಟ್ಟಿಹೊಳಿ ಅವರನ್ನು ವಿಚಾರಿಸಿದಾಗ ನಾನು ಪಕ್ಷದ ಸಾಮಾನ್ಯ ಸೇವಕ ಪಕ್ಷದಲ್ಲಿ ಯಾವುದೇ ಹುದ್ದೆ ಬಯಸಿಲ್ಲ ಹುದ್ದೆ ಇಲ್ಲದೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗದ್ದುಗೆ ಏರಿಸಿದ್ದೇನೆ ಪಕ್ಷದ ಕಾರ್ಯಕರ್ತರ ಶ್ರಮದಿಂದ ಇದು ಸಾಧ್ತ ಆಗಿದೆ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಅಂತಿಮ ಅವರ ಯಾರ ಹೆಸರು ಸೂಚಿಸುತ್ತಾರೋ ಅವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮುಸುವೆ ನನ್ನನ್ನು ಅಭ್ಯರ್ಥಿ ಮಾಡುವ ಬಗ್ಗೆ ಮಾಹಿತಿ ಇಲ್ಲ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ನಾಯಕರ ನಿರ್ಧಾರವೇ ಅಂತಿಮ ಅದಕ್ಕೆ ನಾನು ತೆಲೆಬಾಗುವೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಏಳಿಗೆಗೆ ಹಗಲಿರುಳು ಶ್ರಮಿಸುತ್ತೇನೆ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಪ್ರಾಮಾಣಿಕವಾಗಿ ಎಂದಿದ್ದಾರೆ ಚನ್ನರಾಜ ಹಟ್ಟಿಹೊಳಿ

Check Also

ಬೆಳಗಾವಿಯ ಸಿಂಹ ಇನ್ನಿಲ್ಲ

ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಭೂತರಾಮನಟ್ಟಿ ಬಳಿ ಇರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದ ಹೆಣ್ಣು ಸಿಂಹ ಬಹು ಅಂಗಾಂಗ …

Leave a Reply

Your email address will not be published. Required fields are marked *