Breaking News

ಗೋಕಾಕ jMFC ಕೋರ್ಟಿನಿಂದ ಸಿಎಂ ಯಡಿಯೂರಪ್ಪ ಗೆ ಸಮನ್ಸ್ ಜಾರಿ

ಬೆಳಗಾವಿ- ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಮಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವ್ಹಿಲ್ ಜಡ್ಜ್ JMFC ಕೋರ್ಟ್  ಸಮನ್ಸ್ ಜಾರಿ ಮಾಡಿದೆ.

ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು,ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು,ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಮಂಧಿಸಿದಂತೆ ಗೋಕಾಕ್ ಪೋಲೀಸ್ ಠಾಣೆಯಿಂದ ನ್ಯಾಯಾಲಯದಲ್ಲಿ “B” ರಿಪೋರ್ಟ್ ಸಲ್ಲಿಕೆಯಾಗಿತ್ತು ಆದ್ರೆ ನ್ಯಾಯಾಲಯ “B” ರಿಪೋರ್ಟ್ ನ್ನು ತಿರಸ್ಕಾರ ಮಾಡಿ ಮುಖ್ಯಮಂತ್ರಿ ಬಿ .ಎಸ್ ಯಡಿಯೂರಪ್ಪ ನವರಿಗೆ ಸೆಪ್ಟೆಂಬರ್ 1ರಂದು ನ್ಯಾಯಾಲಯಕ್ಕೆ ಹಾಜರಾಗುತೆ ಸಮನ್ಸ್ ಜಾರಿ ಮಾಡಿದೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *