ನಗರದ ಹೊರವಲಯದ ಮನೆಯಲ್ಲಿ ಕೊಳೆತ ಎರಡು ಶವ ಪತ್ತೆ….

ಅಥಣಿ- ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವಗಳು ಪತ್ತೆಯಾಗಿವೆ.ಅಥಣಿ ಪಟ್ಟಣದ ಮದಭಾವಿ ರಸ್ತೆ ಚೌವ್ಹಾಣ್ ತೋಟದಲ್ಲಿ ಜೋಡಿ ಶವಗಳು ಪತ್ತೆಯಾಗಿವೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಚೌಹಾಣ್ ತೋಟದಲ್ಲಿ,ನಾನಾ ಸಾಹೇಬ್ ಬಾಬು ಚೌವ್ಹಾಣ್ (58)
ಜಯಶ್ರೀ ನಾನಾ ಸಾಹೇಬ್ ಚೌವ್ಹಾಣ್ (50) ಎಂಬಾತರ ಮೃತದೇಹಗಳು ಸಿಕ್ಕಿವೆ.ನಾಲ್ಕು ದಿನದ ಹಿಂದೆ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ‌.

ಮನೆಯ ಸುತ್ತಲೂ ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ,ಪಕ್ಕದ ಮನೆಯವರು ಗಮನಿಸಿ ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ದಂಪತಿಗಳ ಸಾವಿನ ವಿಚಾರ ಗೊತ್ತಾಗಿದೆ.ಸ್ಥಳಕ್ಕೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡದಿದ್ದು ತನಿಖೆ ಶುರುವಾಗಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *