ಘಟಪ್ರಭಾ ನದಿಗೆ ಬಿದ್ದ ಬೈಕ್ ಇಬ್ಬರು ನೀರು ಪಾಲು….!!

ಬೆಳಗಾವಿ-ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಗಳು.ಕೊಚ್ಚಿಹೋದ ಘಟನೆ ನಡೆದಿದೆ.ಬೆ

ಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಬಳಿ ಘಟನೆ ನಡೆದಿದೆ.

ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬ ಬೈಕ್ ಬಿದ್ದ ಕಾರಣಚನ್ನಪ್ಪ ಹರಿಜನ್(30), ದುರ್ಗವ ಹರಿಜನ್(25) ಇಬ್ಬರು ಕೊಚ್ಚಿಹೋಗಿದ್ದಾರೆ.ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ ಹೋರಟ್ಟಿದ್ದ ಇಬ್ಬರು ನೀರು ಪಾಲಾಗಿದ್ದಾರೆ.

ಬ್ರಿಡ್ಜ್ ಬಳಿ ಬೈಕ್ ಪತ್ತೆಯಾಗಿದ್ದು ಇಬ್ಬರಿಗಾಗಿ ಶೋಧ ಕಾರ್ಯ ನಡೆದಿದೆ.ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಹರಿವು ಇದೆ ಹೀಗಾಗಿ ನೀರಿನ ರಬಸದಲ್ಲಿ ಇಬ್ಬರು ಕೊಚ್ಚಿಹೋಗಿದ್ದು ದುರ್ದೈವದ ಸಂಗತಿ.

ಸ್ಥಳಕ್ಕೆ ಎಸ್ ಡಿ ಆರ್ ಎಫ್ ‌ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಶೋಧಕಾರ್ಯ ನಡೆಸಿ ಇಬ್ಬರ ಶವಗಳನ್ನು ಪತ್ತೆ ಮಾಡಿದ್ದಾರೆ.ನಿನ್ನೆ ಆರಂಭವಾದ ಶೋಧ ಕಾರ್ಯಾಚರಣೆ ಇಂದು ಮಧ್ಯಾಹ್ನ ಅಂತ್ಯಗೊಂಡಿದೆ.
ಕುಲಕೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *