Breaking News

ಎರಡು ಲಾರಿಗಳ ಡಿಕ್ಕಿ, ನಂತರ ಪಲ್ಟೀ,,ಕ್ಲೀನರ್ ಸಾವು,ಇಬ್ಬರು ಚಾಲಕರಿಗೆ ಗಾಯ

ಬೆಳಗಾವಿ- ಮಹಾರಾಷ್ಟ್ರದಿಂದ ತಮಿಳುನಾಡಿಗೆ ಸಕ್ಕರೆ ತುಂಬಿಕೊಂಡು ಎರಡು ಲಾರಿಗಳು ಡಿಕ್ಕಿಯಾಗಿ,ನಂತರ ಪಲ್ಟೀಯಾಗಿ ತಮಿಳುನಾಡು ಮೂಲದ 42 ವರ್ಷದ ಕ್ಲೀನರ್ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಸಮೀಪದ ಬಡೇಕೊಳ್ಳ ಮಠದ ಬಳಿ ನಡೆದಿದೆ.

ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು ಪಲ್ಟಿಯಾದ ಎರಡೂ ಲಾರಿಗಳು ಹೋಗುತ್ತಿರುವಾಗ ಹಿಂದಿನ ಲಾರಿ ಮುಂದಿನ ಲಾರಿಗೆ ಡಿಕ್ಕಿ ಹೊಡೆದಿದೆ ,ಹಿಂದಿನ ಲಾರಿಯ ಕ್ಲೀನರ್ ಮೃತಪಟ್ಟಿದ್ದು ಎರಡೂ ಲಾರಿಗಳ ಚಾಲಕರು ಗಾಯಗೊಂಡಿದ್ದಾರೆ.
ಎರಡೂ ಲಾರಿಗಳು ಒಂದೇ ಟ್ರಾನ್ಸಪೋರ್ಟ್ ಕಂಪನಿಗೆ ಸೇರಿವೆ ಎರಡೂ ಲಾರಿಗಳಲ್ಲಿ ಸಕ್ಕರೆ ಚೀಲಗಳು ತುಂಬಿಕೊಂಡಿದ್ದವು .ಲಾರಿಗಳು ಪಲ್ಟೀಯಾದ ಪರಿಣಾಮ ಸಕ್ಕರೆ ಚೀಲಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿದ್ದವು.

ಲಾಕ್ ಡೌನ್ ಸಂಧರ್ಬದಲ್ಲಿ ಅಷ್ಟೊಂದು ವಾಹನಗಳು ಓಡಾಡುತ್ತಿಲ್ಲ ಆದರೂ ಲಾರಿಗಳ ಅಪಘಾತಕ್ಕೀಡಾಗಿದ್ದು ದುರ್ದೈವದ ಸಂಗತಿ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *