ಬೆಳಗಾವಿಯಲ್ಲಿ ಪಾನ್ ಅಂಗಡಿ ಮಾಲೀಕನ ಮರ್ಡರ್….

ಬೆಳಗಾವಿ-ಪಾನ್ ಅಂಗಡಿ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ,ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ನಗರದ ವಡಗಾವಿ ಪ್ರದೇಶದಲ್ಲಿರುವ ಲಕ್ಷ್ಮೀ ನಗರದಲ್ಲಿ ನಡೆದಿದೆ.

ಬೆಳಗಾವಿಯ ಶಹಾಪೂರ ಠಾಣೆ ವ್ಯಾಪ್ತಿಯಲ್ಲಿ ಬರುವ ವಡಗಾವಿ ಪ್ರದೇಶದ ಲಕ್ಷ್ಮೀ ನಗರದ ನಿವಾಸಿ ಪಾನ್ ಅಂಗಡಿ ನಡೆಸುತ್ತಿದ್ದ ಬಾಳಕೃಷ್ಣ ಶೆಟ್ಟಿ (50) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾತ್ರಿ 11-00 ಗಂಟೆಗೆ ನಡೆದಿದೆ.

ಬಾಳಕೃಷ್ಣ ಶೆಟ್ಟಿ ಹಲವಾರು ವರ್ಷಗಳಿಂದ ಲಕ್ಷ್ಮೀ ನಗರದಲ್ಲಿ ಪಾನ್ ಅಂಗಡಿ ನಡೆಸುತ್ತಿದ್ದ,ಇಂದು ರಾತ್ರಿ ಅಂಗಡಿ ಬಂದ್ ಮಾಡಿ ಮನೆಗೆ ಹೋದಾಗ ದಾಳಿ ಮಾಡಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಕೊಲೆಗೆ ಕಾರಣ ಏನು ? ಎಂಬುದು ಗೊತ್ತಾಗಿಲ್ಲ,ಶಹಾಪೂರ ಪೋಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಶುರು ಮಾಡಿದ್ದಾರೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *