Breaking News

ಬೆಳಗಾವಿ: ಗೂಡ್ಸ್ ವಾಹನದಲ್ಲಿ ಪ್ರಯಾಣಿಕರನ್ನು ತುಂಬಿದ್ರೆ ಹುಷಾರ್, ಕೇಸ್ ಹಾಕಲು ಡಿಸಿ ಆದೇಶ

ಗೂಡ್ಸ್ ವಾಹನದಲ್ಲಿ ಪ್ರಯಾಣ: ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

ಬೆಳಗಾವಿ:ಜಿಲ್ಲೆಯಲ್ಲಿ ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯವುದು ಕಂಡುಬಂದರೆ‌ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಚುನಾವಣಾ ಆಯೋಗ ಕೂಡ ಗಂಭೀರವಾಗಿ ಪರಿಗಣಿಸಿದೆ.

ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದನ್ನು ಮೋಟಾರು ವಾಹನ ಕಾಯ್ದೆ ಪ್ರಕಾರ ನಿಷೇಧಿಸಲಾಗಿರುತ್ತದೆ.
ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದಿನಿಂದ ಜಿಲ್ಲೆಯಾದ್ಯಂತ ತೀವ್ರ ತಪಾಸಣೆ ನಡೆಸಲಿದ್ದಾರೆ. ಕಾನೂನು ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮವನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.

ಸುರಕ್ಷಿತ ಪ್ರಯಾಣದ ದೃಷ್ಟಿಯಿಂದ ಸಾರ್ವಜನಿಕರು ಗೂಡ್ಸ್ ವಾಹನಗಳಲ್ಲಿ ಸಂಚರಿಸಬಾರದು. ವಾಹನ ಮಾಲೀಕರು ಕೂಡ ಇದಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
****

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *