Breaking News

ಡಿಸಿಸಿ ಬ್ಯಾಂಕ್ ಚುನಾವಣೆ ನಾಳೆ ಅಲ್ಲೇ ಡ್ರಾ…ಅಲ್ಲೇ ಬಹುಮಾನ….!!

ಬೆಳಗಾವಿ- ಬೆಳಗಾವಿಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಹದಿಮೂರು ಕ್ಷೇತ್ರಗಳ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು,ನಾಳೆ ಮೂರು ಕ್ಷೇತ್ರಗಳ ಚುನಾವಣೆ ನಡೆಯಲಿದೆ.

ಖಾನಾಪೂರ,ತಾಲ್ಲೂಕಿನ ಪಿಕೆಪಿಎಸ್,ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಪ್ರತಿನಿಧಿಗಳ ಸ್ಥಾನಕ್ಕೆ,ಹಾಗು ನೇಕಾರ ಸಹಕಾರಿ ಕ್ಷೇತ್ರದ ಪ್ರತಿನಿಧಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಈ ಮೂರು ಕ್ಷೇತ್ರಗಳ ಪೈಕಿ ಖಾನಾಪೂರ ದಲ್ಲಿ ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಮತ್ತು ಖಾನಾಪೂರದ ಶಾಸಕಿ ಅಂಜಲಿ ನಿಂಬಾಳ್ಕರ್ ನಡುವೆ ಬಿರುಸಿನ ಪೈಪೋಟಿ ನಡೆದಿದ್ದು,ಇಬ್ಬರ ನಡುವೆ ಭರ್ಜರಿ ಕಿತ್ತಾಟ ನಡೆದಿದೆ.

ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಳಗಾವಿ ನಗರದ ಬಿ.ಕೆ ಮಾಡೆಲ್ ಹೈಸ್ಕೂಲಿನಲ್ಲಿ ಮತದಾನ ನಡೆಯಲಿದ್ದು, ಮತದಾನ ಮುಗಿದ ಬಳಿಕ ಮತ ಎಣಿಕೆ ಕಾರ್ಯವೂ ನಡೆಯಲಿದೆ.

ಒಟ್ಟಾರೆ ನಾಳೆ ಡಿಸಿಸಿ ಬ್ಯಾಂಕಿನ ಮೂರು ಕ್ಷೇತ್ರಗಳ ಮತದಾನ ನಡೆಯಲಿದ್ದು ಅಲ್ಲೇ ಡ್ರಾ..ಅಲ್ಲೇ ಬಹುಮಾನ ಸಿಗಲಿದೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *