ಡಿಸಿಸಿ ಬ್ಯಾಂಕ್ ಚುನಾವಣೆ ನಾಳೆ ಅಲ್ಲೇ ಡ್ರಾ…ಅಲ್ಲೇ ಬಹುಮಾನ….!!

ಬೆಳಗಾವಿ- ಬೆಳಗಾವಿಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಹದಿಮೂರು ಕ್ಷೇತ್ರಗಳ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು,ನಾಳೆ ಮೂರು ಕ್ಷೇತ್ರಗಳ ಚುನಾವಣೆ ನಡೆಯಲಿದೆ.

ಖಾನಾಪೂರ,ತಾಲ್ಲೂಕಿನ ಪಿಕೆಪಿಎಸ್,ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಪ್ರತಿನಿಧಿಗಳ ಸ್ಥಾನಕ್ಕೆ,ಹಾಗು ನೇಕಾರ ಸಹಕಾರಿ ಕ್ಷೇತ್ರದ ಪ್ರತಿನಿಧಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಈ ಮೂರು ಕ್ಷೇತ್ರಗಳ ಪೈಕಿ ಖಾನಾಪೂರ ದಲ್ಲಿ ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಮತ್ತು ಖಾನಾಪೂರದ ಶಾಸಕಿ ಅಂಜಲಿ ನಿಂಬಾಳ್ಕರ್ ನಡುವೆ ಬಿರುಸಿನ ಪೈಪೋಟಿ ನಡೆದಿದ್ದು,ಇಬ್ಬರ ನಡುವೆ ಭರ್ಜರಿ ಕಿತ್ತಾಟ ನಡೆದಿದೆ.

ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಳಗಾವಿ ನಗರದ ಬಿ.ಕೆ ಮಾಡೆಲ್ ಹೈಸ್ಕೂಲಿನಲ್ಲಿ ಮತದಾನ ನಡೆಯಲಿದ್ದು, ಮತದಾನ ಮುಗಿದ ಬಳಿಕ ಮತ ಎಣಿಕೆ ಕಾರ್ಯವೂ ನಡೆಯಲಿದೆ.

ಒಟ್ಟಾರೆ ನಾಳೆ ಡಿಸಿಸಿ ಬ್ಯಾಂಕಿನ ಮೂರು ಕ್ಷೇತ್ರಗಳ ಮತದಾನ ನಡೆಯಲಿದ್ದು ಅಲ್ಲೇ ಡ್ರಾ..ಅಲ್ಲೇ ಬಹುಮಾನ ಸಿಗಲಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *