Breaking News

ನಾಳೆ ಬೆಳಗಾವಿಗೆ ಡಿ.ಕೆ ಶಿವಕುಮಾರ್…

ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಯ ಪ್ರಚಾರಾರ್ಥ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ನಾಳೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ನಾಳೆ ಭಾನುವಾರ ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸುವ ಅವರು,ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದು ಸೋಮವಾರ ದಿನಾಂಕ 29 ರಂದು ಬೆಳಗಾವಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರ ಸಭೆ ನಡೆಸಿ ವಿಧಾನ ಪರಿಷತ್ತಿನ ಚುನಾವಣೆಯ ಕುರಿತು ಚರ್ಚಿಸಲಿದ್ದಾರೆ.

ಉಸ್ತುವಾರಿಗಳ ನೇಮಕ

ವಿಧಾನ ಪರಿಷತ್ತಿನ ಚುನಾವಣೆಯ ಹಿನ್ನಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿಗೆ ಇಬ್ಬರು ವೀಕ್ಷಕರನ್ನು ಕೆಪಿಸಿಸಿ ನೇಮಿಸಿದೆ.

ಬೆಳಗಾವಿ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ಶಾಸಕ ಎನ್ ಎ ಹ್ಯಾರೀಸ್,ಚಿಕ್ಕೋಡಿ ಜಿಲ್ಲೆಯ ಉಸ್ತುವಾರಿಯನ್ನಾಗಿ, ಮಾಜಿ ವಿಧಾನ ಪರಿಷತ್ತಿನ ಸದಸ್ಯ ಐವಾನ್ ಡಿಸೋಜ ಅವರನ್ನು ನೇಮಿಸಲಾಗಿದೆ.

Check Also

ಬೆಳಗಾವಿ ಜಿಲ್ಲೆಯ ಸಮಸ್ಯೆ ಸಿಎಂ ಭೇಟಿಯಾದ ಬೆಳಗಾವಿ ಶಾಸಕರು

ಬೆಂಗಳೂರು- ಬೆಳಗಾವಿ ಜಿಲ್ಲೆಯ ಸಮಸ್ಯೆಗಳನ್ನು ಇಂದು ಸಿಎಂ ಸಿದ್ರಾಮಯ್ಯ ಆಲಿಸಿದರು ಬೆಳಗಾವಿ ಜಿಲ್ಲೆಯ ಇಬ್ಬರು ಮಂತ್ರಿಗಳು ಹಾಗೂ ಕಾಂಗ್ರೆಸ್ ಶಾಸಕರು …

Leave a Reply

Your email address will not be published. Required fields are marked *