Breaking News

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಡಬಲ್ ಮರ್ಡರ್…

ಬೆಳಗಾವಿ:ದಂಪತಿಗಳಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹುಕ್ಕೇರಿ ತಾಲೂಕಿನ ಮಾವನೂರಿನ ಗಜೇಂದ್ರ ಈರಪ್ಪ ಹುನ್ನೂರಿ(60) ಹಾಗೂ ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ(45) ಹತ್ಯೆಗೀಡಾದ ದಂಪತಿ.
ಮಾವನೂರಿನಲ್ಲಿನ ಮನೆಯಲ್ಲಿ ದಂಪತಿಗಳಿಬ್ಬರನ್ನು ಮಾರಕಾಸ್ತ್ರಗಳಿಂದ ಮುಖ ಮತ್ತು ತಲೆಗೆ ಹಲ್ಲೆ ನಡೆಯಿಸಿ ಶುಕ್ರವಾರ ಕೊಲೆಗೈಯಲಾಗಿದೆ.

ದಂಪತಿಗೆ ಓರ್ವ ಮಗಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಶುಕ್ರವಾರ ಮನೆಯಲ್ಲಿ ದಂಪತಿ ಮಾತ್ರವೇ ವಾಸಗಿದ್ದು, ಶುಕ್ರವಾರವೇ ಯಾರೋ ಮಾರಕಾಸ್ತ್ರಗಳಿಂದ ಕೊಚ್ಚಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಕ್ಕಪಕ್ಕದವರು ಭಾನುವಾರ ಬೆಳಗ್ಗೆ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *