Home / Breaking News / ಸುರೇಶ್ ಅಂಗಡಿ ಕುಟುಂಬ, ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ,ಯಾರ ವಿರುದ್ಧ ದ್ವೇಷ ಸಾಧಿಸಿಲ್ಲ- ಡಾ.ಸೋನಾಲಿ

ಸುರೇಶ್ ಅಂಗಡಿ ಕುಟುಂಬ, ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ,ಯಾರ ವಿರುದ್ಧ ದ್ವೇಷ ಸಾಧಿಸಿಲ್ಲ- ಡಾ.ಸೋನಾಲಿ

ಬೆನಕನಹಳ್ಳಿಯಲ್ಲಿ ಮನೆ,ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ಮತಯಾಚಿಸುತ್ತಿರುವ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್.

ಬೆಳಗಾವಿ-ದಿ.ಸುರೇಶ ಅಂಗಡಿ ಅವರ ಕುಟುಂಬ ಈವರೆಗೆ ಯಾರಿಗೂ ಕೇಡು ಬಯಸಿಲ್ಲ,ಯಾರ ವಿರುದ್ಧವೂ ದ್ವೇಷ ಸಾಧಿಸಿಲ್ಲ,ಸಮಾಜ ಸೇವೆಯನ್ನೇ ಉಸಿರಾಗಿಸಿಕಡಿರುವ ಈ ಕುಟುಂಬಕ್ಕೆ ಎಲ್ಲ,ಜಾತಿ,ಧರ್ಮ ಭಾಷೆಯ ಜನರನ್ನು ಪ್ರೀತಿಸುವ ಮನಸ್ಸಿದೆ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ, ಗಣೇಶಪೂರ,ಬೆನಕನಹಳ್ಳಿ,ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪಾದಯಾತ್ರೆ ನಡೆಸಿ,ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರ ಪರವಾಗಿ ಮತಯಾಚಿಸಿ ಮಾತನಾಡಿದ ಅವರು,ಸುರೇಶ್ ಅಂಗಡಿ ಅವರ ಪ್ರಯತ್ನದಿಂದ ಬೆಳಗಾವಿ ಜಿಲ್ಲೆಗೆ ಅನೇಕ ಅಭಿವೃದ್ಧಿ ಯೋಜನೆಗಳು ಬಂದಿವೆ,ರೇಲ್ವೆ ಮಂತ್ರಿಯಾದ ಬಳಿಕ ಅವರು ಅಲ್ಪಾವಧಿಯಲ್ಲೇ ಕ್ರಾಂತಿ ಮಾಡಿದ್ದರು,ಅವರ ಅಕಾಲಿಕ ನಿಧನದಿಂದ ಈಗ ಚುನಾವಣೆ ಬಂದಿದೆ ಸುರೇಶ್ ಅಂಗಡಿ ಅವರ ಪತ್ನಿ ಮಂಗಲಾ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದು ಅವರನ್ನು ದಾಖಲೆ ಮತಗಳಿಂದ ಗೆಲ್ಲಿಸಬೇಕು ಎಂದು ಡಾ.ಸೋನಾಲಿ ಸರ್ನೋಬತ್ ಮತದಾರರಲ್ಲಿ ಮನವಿ ಮಾಡಿಕೊಂಡರು.

ಕೇಂದ್ರದಲ್ಲಿರುವ ನರೇಂದ್ರ ಮೋದಿ ಅವರ ಸರ್ಕಾರ ಬೆಳಗಾವಿ ಜಿಲ್ಲೆಗೆ ಅನೇಕ ಕೊಡುಗೆಗಳನ್ನು ನೀಡಿದೆ.ಬೆಳಗಾವಿಗೆ ಸ್ಮಾರ್ಟ್ ಸಿಟಿ ಯೋಜನೆ ಮಂಜೂರು ಮಾಡಿ ಇಲ್ಲಿ ಅಭಿವೃದ್ಧಿಯ ಹೊಳೆ ಹರಿಸಿದೆ,ರಾಜ್ಯದಲ್ಲಿರುವ ಯಡಿಯೂರಪ್ಪ ನೇತ್ರತ್ವದ ಬಿಜೆಪಿ ಸರ್ಕಾರ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ.ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾದ್ಯವಿದ್ದು ಈ ಬಾರಿ ಬಿಜೆಪಿಯ ಮಂಗಲಾ ಅಂಗಡಿಯವರನ್ನು ಗೆಲ್ಲಿಸುವ ಮೂಲಕ,ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮತದಾರರನ್ನು ದಿಶಾಬೂಲು ಮಾಡುತ್ತಿರುವ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಬೇಕು ಎಂದು ಡಾ.ಸೋನಾಲಿ ಮತದಾರರಲ್ಲಿ ಮನವಿ ಮಾಡಿಕೊಂಡರು.

ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಜ್ಯೋತಿ ಕುಲಕರ್ಣಿ ಸೇರಿದಂತೆ ಇತರ ಮಹಿಳಾ ಬಿಜೆಪಿ ಕಾರ್ಯಕರ್ತೆಯರು ಪಾದಯಾತ್ರೆಯ ಮೂಲಕ ಮನೆ,ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ಮತಯಾಚಿಸಿದರು.

Check Also

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ …

Leave a Reply

Your email address will not be published. Required fields are marked *