Breaking News
Home / Breaking News / ಅಮೀತ್ ಶಾ ಅವರನ್ನು ಭೇಟಿಯಾದ ಡಾ.ಸೋನಾಲಿ ಸರ್ನೋಬತ್,ಖಾನಾಪೂರ ಕ್ಷೇತ್ರದಲ್ಲಿ ಸಂಚಲನ..!!

ಅಮೀತ್ ಶಾ ಅವರನ್ನು ಭೇಟಿಯಾದ ಡಾ.ಸೋನಾಲಿ ಸರ್ನೋಬತ್,ಖಾನಾಪೂರ ಕ್ಷೇತ್ರದಲ್ಲಿ ಸಂಚಲನ..!!

ಬೆಳಗಾವಿ-ಬೆಳಗಾವಿ ಬಿಜೆಪಿ ಸಂಘಟನೆಯಲ್ಲಿ ಹಲವಾರು ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುತ್ತಿರುವ ಬಿಜೆಪಿ ನಾಯಕಿ,ಡಾ.ಸೋನಾಲಿ ಸರ್ನೋಬತ್ ಅವರು ಖಾನಾಪೂರ ತಾಲ್ಲೂಕಿನ ಬಿಜೆಪಿ ಉಸ್ತುವಾರಿಯಾಗಿದ್ದು ಖಾನಾಪೂರ ಕ್ಷೇತ್ರದ ಪ್ರಬಲ ಬಿಜೆಪಿ ಆಕಾಂಕ್ಷಿಯಾಗಿದ್ದಾರೆ.

ಬಿಜೆಪಿ ಸಂಘಟನೆಯಲ್ಲಿ ಕ್ರಿಯಾಶೀಲರಾಗಿರುವ ಅವರು,ಹಲವಾರು ಸಾಮಾಜಿಕ,ಸಂಘಟನಾತ್ಮಕ ಕಾರ್ಯಕ್ರಮಗಳ ಮೂಲಕ ರಾಜ್ಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಡಾ.ಸೋನಾಲಿ ಸರ್ನೋಬತ್ ಅವರು ಈಗ. ಕೇಂದ್ರ ಗೃಹಸಚಿವ ಅಮೀತ್ ಶಾ ಅವರನ್ನು ಭೇಟಿಯಾಗಿರುವ ವಿಚಾರ ಖಾನಾಪೂರ ತಾಲ್ಲೂಕಿನ ಬಿಜೆಪಿ ವಲಯದಲ್ಲಿ ಸಂಚಲನ ಮೂಡಿಸಿದೆ.

ಡಾ.ಸೋನಾಲಿ ಸರ್ನೋಬತ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸೇರಿದಂತೆ ರಾಜ್ಯದ ಹಲವಾರು ಬಿಜೆಪಿ ನಾಯಕರ ಆಶೀರ್ವಾದ ಲಭಿಸಿದ್ದು,ಬಿಜೆಪಿಯ ಚಾಣಕ್ಯ ಎಂದೇ ಪ್ರಸಿದ್ದಿ ಪಡೆದಿರುವ ಅಮೀತ್ ಶಾ ಅವರನ್ನು ಭೇಟಿ ಮಾಡಿರುವ ಡಾ.ಸೋನಾಲಿ,ಖಾನಾಪೂರ ತಾಲ್ಲೂಕಿನ ಅಭಿವೃದ್ಧಿಯ ಕುರಿತು ಗಮನ ಸೆಳೆದಿರುವ ವಿಚಾರ ,ಖಾನಾಪೂರ ತಾಲ್ಲೂಕಿನ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಖಾನಾಪೂರಲ್ಲಿ ಕಚೇರಿ ಆರಂಭಿಸಿ,ಈ ಕಚೇರಿಯ ಮೂಲಕ ಜನರ ಕಷ್ಟ ಸುಖ ಆಲಿಸಿ ಸ್ಥಳದಲ್ಲೇ ಅದಕ್ಕೆ ಸ್ಪಂದಿಸುತ್ತಿರುವ ಡಾ.ಸೋನಾಲಿ ಸರ್ನೋಬತ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಬೇಕು ಎನ್ನುವ ಒತ್ತಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಡಾ.ಸೋನಾಲಿ ಸರ್ನೋಬತ್ ಅವರು ಮಾಡುತ್ತಿರುವ ಪಕ್ಷದ ಸೇವೆ,ಅವರ ವರ್ಚಸ್ಸು ಹೆಚ್ಚಿಸಿದ್ದು,ಅಲ್ಪಾವಧಿಯಲ್ಲೇ ಅವರು ಬಿಜೆಪಿ ಸರ್ಕಾರದಿಂದ ಖಾನಾಪೂರ ತಾಲ್ಲೂಕಿಗೆ ಹಲವಾರು ಯೋಜನೆಗಳನ್ನು ಮಂಜೂರು ಮಾಡಿಸುವ ಮೂಲಕ ತಾಲ್ಲೂಕಿನ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿರುವುದು ವಿಶೇಷವಾಗಿದೆ.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *