ಬೆಂಗಳೂರು: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕುಟುಂಬ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದರು.
ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಶೀಘ್ರ ಕ್ರಮಕೈಗೊಳ್ಳಿ ಎಂದು ಮೃತ ಪೊಲೀಸ್ ಅಧಿಕಾರಿ ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ನಮ್ಮ ಮಗ ಅಮಾಯಕನಾಗಿದ್ದು, ಪೊಲೀಸ್ ಇಲಾಖೆಯಲ್ಲಿ ಅತ್ಯಂತ ನಿಷ್ಠಾವಂತನಾಗಿ ಕಾರ್ಯನಿರ್ವಹಿಸಿದ್ದಾನೆ. ಆತನ ಆತ್ಮಹತ್ಯೆ ಹಿಂದಿನ ರಹಸ್ಯ ಭೇದಿಸಿ, ತಪ್ಪಿತಸ್ಥರನ್ನು ಶಿಕ್ಷಿಸಿ ಎಂದು ಕಲ್ಲಪ್ಪ ಪೋಷಕರು ಒತ್ತಾಯಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಿಎಂ, ಕಲ್ಲಪ್ಪ ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಈಗಾಗಲೇ ಭರವಸೆ ನೀಡಿದ್ದೇನೆ. ಇದನ್ನು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಲಾಗುವುದು ಎಂದು ಹೇಳಿದರು.
ಕಲ್ಲಪ್ಪ ಅವರ ಸಹೋದರನಿಗೆ ಸಹಕಾರ ಸಂಘವೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ಇದೇ ವೇಳೆ ಶಾಸಕ ಎಸ್.ಟಿ. ಸೋಮಶೇಖರ್ ಆಶ್ವಾಸನೆ ನೀಡಿದರು. ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ, ಕಲ್ಲಪ್ಪ ಅವರ ಪತ್ನಿ ವಿದ್ಯಾ, ತಂದೆ ಮತ್ತು ತಾಯಿ, ಸಹೋದರ, ಸಹೋದರಿ ಉಪಸ್ಥಿತರಿದ್ದರು.
Home / Breaking News / ಸಿಎಂ ಭೇಟಿಯಾದ ಕಲ್ಲಪ್ಪ ಕುಟುಂಬ, ಡಿವೈಎಸ್ಪಿ ಸಾವಿಗೆ ಕಾರಣರಾದವರನ್ನು ಶಿಕ್ಷಿಸಿ ಎಂದು ಆಗ್ರಹ
Check Also
ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು
ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …