Breaking News

ರಸ್ತೆಯಲ್ಲಿ ಲಂಚ್….ಕೇಂದ್ರದ ಕೃಷಿ ನೀತಿಗೆ, ಪಂಚ್…!!!

ರಸ್ತೆಯಲ್ಲೇ ಅಡುಗೆ, ರಸ್ತೆಯಲ್ಲೇ ಊಟ…!!!

ಬೆಳಗಾವಿ-/ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು, ಬೆಳಗಾವಿಯ ಸುವರ್ಣಸೌಧ ಎದುರು ಪ್ರತಿಭಟನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆಯಿಂದಲೇ ರೈತರ ಧರಣಿ ಮುಂದುವರೆದಿದೆ. ರೈತರು, ರಸ್ತೆಯಲ್ಲಿ ಅಡುಗೆ ಮಾಡಿಕೊಂಡು, ಎನ್‌ಹೆಚ್‌4 ಪಕ್ಕದ ಸರ್ವೀಸ್ ರಸ್ತೆಯಲ್ಲಿಯೇ ಕುಳಿತು ಊಟ ಮಾಡುವ ಮೂಲಕ ಧರಣಿ ನಿರತ ರೈತರು ನ್ಯಾಷನಲ್ ಹೈವೇ ಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಊಟ ಮಾಡಿ ಮತ್ತೆ ಪ್ರತಿಭಟನೆ ಮುಂದುವರೆಸಿರುವ ರೈತರ ಧರಣಿಯಲ್ಲಿ ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಪಾಲ್ಗೊಂಡಿವೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *