Breaking News
Home / Uncategorized / ಗೋಕಾಕ್ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿ ಎಂಟ್ರಿ…..

ಗೋಕಾಕ್ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿ ಎಂಟ್ರಿ…..

ಗೋಕಾಕ್ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿ ಎಂಟ್ರಿ…

ಬೆಳಗಾವಿ- ಗೋಕಾಕ ಕ್ಷೇತ್ರದಲ್ಲಿ ಉಪ ಚುನಾವಣೆ ರಂಗೇರಿದೆ ಕೆ ಎಂ ಎಫ್ ಅಧ್ಯಕ್ಷ ಅರಬಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಇಂದು ಗೋಕಾಕ್ ಕ್ಷೇತ್ರದಲ್ಲಿ ಎಂಟ್ರಿ ಹೊಡೆದಿದ್ದಾರೆ.

ಗೋಕಾಕಿನ ಎನ್ ಎಸ್ ಎಫ್ ದಲ್ಲಿ ಭೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಆಯೋಜಿಸಿದ ಬಾಲಚಂದ್ರ ಜಾರಕಿಹೊಳಿ ಅವರು ಸಹೋದರ ಬಿಜೆಪಿ ಅಭ್ಯರ್ಥಿ ಸಹೋದರ ರಮೇಶ್ ಜಾರಕಿಹೊಳಿ ಅವರ ಗೆಲುವಿಗೆ ಕಾರ್ಯಕರ್ತರು ಹಗಲಿರಳು ಶ್ರಮಿಸುವಂತೆ ಮನವಿ ಮಾಡಿಕೊಂಡರು

ಭೂತ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಗೋಕಾಕ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಉಸ್ತುವಾರಿ ಶಾಸಕ ನಡಹಳ್ಳಿ ಮಾತನಾಡಿ ಗೋಕಾಕ ಕ್ಷೇತ್ರದ ಪ್ರತಿ ಕ್ಷಣದ ಬೆಳವಣಿಗೆಗಳನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ.ಯಡಿಯೂರಪ್ಪ ಮತ್ತು ಜಾರಕಿಹೊಳಿ ಕುಟುಂಬದವರ ನಡುವೆ ಅವಿನಾಭಾವ ಸಮಂಧವಿದೆ ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಹಿಂದೆ ಬಾಲಚಂದ್ರ ಜಾರಕಿಹೊಳಿ ಸಾಥ್ ನೀಡಿದ್ದರು ಈಗ ರಮೇಶ್ ಜಾರಕಿಹೊಳಿ ಅವರು ಯಡಿಯೂರಪ್ಪ ಅವರಿಗೆ ಸಾಥ್ ಕೊಟ್ಟಿದ್ದಾರೆ ಎಂದು ನಡಹಳ್ಳಿ ಹೇಳಿದರು

ಜಾರಕಿಹೊಳಿ ಅವರಿಗೆ ರಾಜೀನಾಮೆ ಕೊಡುವ ಅವಶ್ಯಕತೆ ಇರಲಿಲ್ಲ ಅಧಿಕಾರ ಅವರ ಹತ್ತಿರ ಇತ್ತು ಅದನ್ನು ಅವರು ಅನುಭವಿಸಬೇಕಾಗಿತ್ತು ಆದರೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ರಮೇಶ್ ಜಾರಕಿಹೊಳಿ ಅವರು ತ್ಯಾಗ ಮಾಡಿದರು ಎಂದು ನಡಹಳ್ಳಿ ಹೇಳಿದರು.

ರಮೇಶ್ ಜಾರಕಿಹೊಳಿ ಅವರು ಹದಿನೇಳು ಜನ ಶಾಸಕರ ತಂಡ ಕಟ್ಟಿಕೊಂಡು ದುಷ್ಟ ಸರ್ಕಾರವನ್ನು ಕಿತ್ತು ಎಸೆದ ಅಸಲಿ ಹಿರೋ ರಮೇಶ್ ಜಾರಕಿಹೊಳಿ ಎಂದರು

Check Also

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರ ಮುಖಕ್ಕೆ ಕಪ್ಪು ಮಸಿ ಎರಚಿದ್ರು…!!

ಬೆಳಗಾವಿ-ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಮಸಿ ಬಳಿದ ಘಟನೆ ಇಂದು ಮಹಾರಾಷ್ಟ್ರದ ಪೂನೆಯಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *