ರಾಯಣ್ಣ ಭಾವಚಿತ್ರಕ್ಕೆ ಅವಮಾನ,ಖನಗಾಂವ ಗ್ರಾಮದಲ್ಲಿ ಗೊಂದಲ..

ರಾಯಣ್ಣ ಭಾವಚಿತ್ರಕ್ಕೆ ಅವಮಾನ,ಖನಗಾಂವ ಪ್ರಕ್ಷುಬ್ಧ…

ಬೆಳಗಾವಿ-ಖನಗಾಂವ ಗ್ರಾಮದಲ್ಲಿ ರಾಯಣ್ಣ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದ್ದು,ಈ ಘಟನೆಯಿಂದಾಗಿಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ತಡರಾತ್ರಿ‌ ಸಂಗೋಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಗೇಡಿಗಳು, ಹರಿದು ಹಾಕಿದ ಘಟನೆ ನಡೆದಿದೆ.
ಕಿಡಿಗೇಡಿಗಳ ಕೃತ್ಯ ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ ಕೂಡಾ ನಡೆದಿದ್ದು
ಟೈಯರ್ ಗೆ ಬೆಂಕಿ ಹಚ್ಚಿ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ.

ಗ್ರಾಮದ ರಸ್ತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಿ ರಾಯಣ್ಣ ಮೂರ್ತಿ ಹಾಕಲಾಗಿತ್ತು.ಇದಾದ ಬಳಿಕ ರಾಯಣ್ಣನ ಭಾವಚಿತ್ರ ಹರಿದು ಹಾಕಿದ ಘಟನೆ ನಡೆದಿದ್ದರಿಂದ ಗ್ರಾಮದಲ್ಲಿ ಗೊಂದಲದ ವಾತಾವರಣ ಇದೆ.
ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಖನಗಾಂವ ಗ್ರಾಮಕ್ಕೆ ಪೋಲೀಸರು ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *