Breaking News
Home / Breaking News / ಸಾರ್ಟ್ ಸಿಟಿ ಕಾಮಗಾರಿ ನೋಡಿದ್ರು….ನಂತರ ಮಸಾಲೆ ದೋಸೆ ತಿಂದ್ರು…!!!

ಸಾರ್ಟ್ ಸಿಟಿ ಕಾಮಗಾರಿ ನೋಡಿದ್ರು….ನಂತರ ಮಸಾಲೆ ದೋಸೆ ತಿಂದ್ರು…!!!

ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ
——————————————————–
“ಡಿಸೆಂಬರ್ ಅಂತ್ಯಕ್ಕೆ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣ”

ಬೆ

ಬೆಳಗಾವಿ-  ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಗುರುವಾರ(ಫೆ.24) ಪರಿಶೀಲಿಸಿದರು.

ನಗರದ ಸಿ.ಬಿ.ಟಿ. ಕಾಮಗಾರಿ, ವಿವಿಧ ರಸ್ತೆಗಳು, ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್‌ ಸೆಂಟರ್, ಟಿಳಕವಾಡಿಯ ಕಲಾಮಂದಿರ ಮತ್ತಿತರ ಕಾಮಗಾರಿಗಳನ್ನು ಅವರು ವೀಕ್ಷಿಸಿದರು.
ಸಿಬಿಟ 2018 ರಲ್ಲಿ ಕಾಮಗಾರಿ ಆರಂಭವಾಗಿದೆ. ರಕ್ಷಣಾ ಇಲಾಖೆಯ ಜಾಗೆ ಇರುವುದರಿಂದ ಎನ್.ಓ.ಸಿ. ಸಿಗದೇ ಒಂದು ವರ್ಷ ಕಾಮಗಾರಿ ವಿಳಂಬವಾಯಿತು.
ಉದ್ಧೇಶಿತ ನೂತನ ಸಿ.ಬಿ.ಟಿ.ಯಲ್ಲಿ 28 ಬಸ್ ಪಾರ್ಕಿಂಗ್ ಫ್ಲ್ಯಾಟ್ ಫಾರ್ಮ್, ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಾರಿಗೆ ಸಂಸ್ಥೆಗೆ ವಾಣಿಜ್ಯ ಸಂಕೀರ್ಣ, ರೆಸ್ಟೋರೆಂಟ್ ಮತ್ತಿತರ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಸ್ಮಾರ್ಟ್ ಸಿಟಿ ಕಮಾಂಡ್ ಸೆಂಟರ್ ವೀಕ್ಷಣೆ:

ಸಚಿವ ಗೋವಿಂದ ಕಾರಜೋಳ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಅ್ಯಂಡ್ ಕಂಟ್ರೋಲ್‌ ಸೆಂಟರ್ ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡರು.

46 ಕೋಟಿ ವೆಚ್ಚದಲ್ಲಿ ಕಮಾಂಡ್ ಆ್ಯಂಡ್ ಕಂಟ್ರೋಲ್‌ ಸೆಂಟರ್‌ ನಿರ್ಮಿಸಲಾಗಿದೆ. ಬಸ್, ಆ್ಯಂಬ್ಯುಲೆನ್ಸ್ ಹಾಗೂ ತುರ್ತು ಸೇವೆಗೆ ವಾಹನಗಳ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ ತಿಳಿಸಿದರು.

67 ನಗರ ಸಾರಿಗೆ ಬಸ್ ಗಳಿಗೆ ಜಿಪಿಎಸ್, ಹತ್ತು ಬಸ್ ಶೆಲ್ಟರ್ ಗಳಲ್ಲಿ ಕ್ಯಾಮೆರಾ, ನಗರದ ಸ್ಮಾರ್ಟ್ ಬಸ್ ಶೆಲ್ಟರ್ ಗಳಲ್ಲಿ ಮಾಹಿತಿ ಫಲಕ ಅಳವಡಿಸಲಾಗಿದೆ.
ಕಸ ಹಾಕುವವರ ಮೇಲೆ ನಿಗಾ ವಹಿಸಲು 20 ಸ್ಥಳಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಕಸ ಚೆಲ್ಲಿದಾಗ ತಕ್ಷಣವೇ
ಒಂಬತ್ತು ಸ್ಥಳಗಳಲ್ಲಿ ಸ್ಮಾರ್ಟ್ ಪೋಲ್ ಅಳವಡಿಸಲಾಗಿದೆ. 360 ಡಿಗ್ರಿ ಕ್ಯಾಮೆರಾ ರೊಟೇಟ್ ಆಗುತ್ತದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸಂಬಂಧಿಸಿದ ವರಿಗೆ ಮಾಹಿತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದರು.

ಡಿಸೆಂಬರ್ ಅಂತ್ಯಕ್ಕೆ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣ:

ಇದೇ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅವರು, ಎರಡು ವರ್ಷಗಳಿಂದ ಕೋವಿಡ್ ಹಾಗೂ ಅತಿಯಾದ ಮಳೆಯಿಂದ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗಿವೆ. ಡಿಸೆಂಬರ್ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಟಿಳಕವಾಡಿಯಲ್ಲಿ 43.62 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಲಾಮಂದಿರ ಕಾಮಗಾರಿಯನ್ನು ವೀಕ್ಷಿಸಿದರು.
ಕಾಮಗಾರಿ ಒಂದು ವರ್ಷ ವಿಳಂಬವಾಗಿದೆ. ಯೋಜನೆಯ ಸ್ವಲ್ಪ ಜಾಗೆಗೆ ಸಂಬಂಧಿಸಿದಂತೆ ಇರುವ ಕಾನೂನು ತೊಡಕು ನಿವಾರಿಸಿಕೊಂಡು ಮುಂದಿನ ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.
ಕಾಮಗಾರಿ ಪೂರ್ಣಗೊಂಡ ಬಳಿಕ ಇದರಿಂದ ಬರುವ ಆದಾಯದಲ್ಲಿ ಐದು ವರ್ಷಗಳಲ್ಲಿ ಯೋಜನಾ ವೆಚ್ವ ಮರಳಿ ಬರಲಿದೆ ಎಂದರು. ಆದ್ದರಿಂದ ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು.
ಕಲಾಮಂದಿರದ ವೈಶಿಷ್ಟ್ಯಗಳನ್ನು ಶಾಸಕ ಅಭಯ್ ಪಾಟೀಲ ಅವರು ಸಚಿವರಿಗೆ ವಿವರಿಸಿದರು.

ತಿನಿಸುಕಟ್ಟೆಯಲ್ಲಿ ತಿಂಡಿ ಸವಿದ ಸಚಿವರು:

ಇದೇ ಸಂದರ್ಭದಲ್ಲಿ ತಿನಿಸುಕಟ್ಟೆಗೆ ಭೇಟಿ ನೀಡಿದ ಸಚಿವ ಗೋವಿಂದ ಕಾರಜೋಳ ಅವರು, ಬೆಣ್ಣೆದೋಸೆ ಸವಿದರು.
ಇದಕ್ಕೂ ಮುಂಚೆ ಚಹಾಕಟ್ಟೆಯಲ್ಲಿ ಚಹಾ ಕೇಳಿ ಪಡೆದ ಸಚಿವರು. ತಿನಿಸುಕಟ್ಟೆಯನ್ನು ಸಂಪೂರ್ಣವಾಗಿ ವೀಕ್ಷಿಸಿದರು.
ಸಂಸದರಾದ ಮಂಗಳ ಅಂಗಡಿ, ಶಾಸಕ ಅಭಯ್ ಪಾಟೀಲ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸಾಥ್ ನೀಡಿದರು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ ಬಾಗೇವಾಡಿ, ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ ಮತ್ತಿತರರು ಉಪಸ್ಥಿತರಿದ್ದರು.
****

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *