Breaking News

ಮಹಾ ಮಳೆಗೆ ಬೆಳಗಾವಿಯಲ್ಲಿ ಬೈಕ್ ಸವಾರ ಬಲಿ….

ಬೆಳಗಾವಿ- ಬೆಳಗಾವಿಯಲ್ಲಿ ಇಂದು ಮಂಗಳವಾರ ಸುರಿದ ಬಿರುಗಾಳಿ ಮಳೆಗೆ ಮರವೊಂದು ನೆಲಕ್ಕುರುಳಿದ ಪರಿಣಾಮ ಓರ್ವ ಬೈಕ್ ಸವಾರ ಮರದ ಬುಡಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬೆಳಗಾವಿಯ ಕಾಳಿ ಅಂಬ್ರಾಯಿ ಪ್ರದೇಶದಲ್ಲಿ ಇಂದು ಸಂಜೆ ಬಿರುಗಾಳಿ ಮಿಶ್ರಿತ ಮಳೆ ಸುರಿಯುತ್ತಿರುವಾಗ ದೊಡ್ಡ ಮರವೊಂದು ಬೈಕ್ ಸವಾರನ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬೈಕ್ ಚಾಲಕ
ವಿಜಯ ಕೊಲ್ಲಾಪುರಿ
ಮಾತಂಗಿ ಎಂದು ಗುರುತಿಸಲಾಗಿದ್ದು
ಕಾಳಿ ಅಂಬರಾಯಿ ಪ್ರದೇಶದ ನಿವಾಸಿಯಾಗಿದ್ದಾನೆ.
ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಂಡಾ ಆಕ್ಟಿವಾ ಮೇಲೆ ಸಂಚರಿಸುತ್ತಿರುವ ಸಮಯದಲ್ಲಿ ಈ ಅವಘಡ ಸಂಬವಿಸಿದೆ.

Check Also

ಲೋಕಸಭೆಯಲ್ಲಿ ಬೆಳಗಾವಿ ಗಡಿ ಕುರಿತು ಶಿವಸೇನೆ ಕ್ಯಾತೆ

ಬೆಳಗಾವಿ- ಬೆಳಗಾವಿ ಗಡಿವಿವಾದದ ಕುರಿತು ನಿರಂತರವಾಗಿ ಕಾಲು ಕೆದರಿ ಜಗಳ ತೆಗೆಯುವ ಉದ್ಧವ ಠಾಕ್ರೆ ನೇತ್ರತ್ವದ ಶಿವಸೇನೆ,ಲೋಕಸಭೆಯಲ್ಲಿ ಕರ್ನಾಟಕ ಮಹಾರಾಷ್ಟ್ರ …

Leave a Reply

Your email address will not be published. Required fields are marked *