Breaking News
Home / Breaking News / ಯಾರಿಗೆ ಯಾವ ಖಾತೆ..? ಇಲ್ಲಿದೆ ಸಂಪೂರ್ಣ ವಿವರ..!

ಯಾರಿಗೆ ಯಾವ ಖಾತೆ..? ಇಲ್ಲಿದೆ ಸಂಪೂರ್ಣ ವಿವರ..!

ಸಚಿವರಿಗೆ ಖಾತೆ ಹಂಚಿಕೆ: ಯಾರ್ಯಾರಿಗೆ ಯಾವ ಖಾತೆ..? ಇಲ್ಲಿದೆ ನೋಡಿ.

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ದೊರೆತಿದೆ.

ಉಳಿದಂತೆ ಡಾ. ಜಿ. ಪರಮೇಶ್ವರ್- ಗೃಹ, ಹೆಚ್.ಕೆ. ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ, ಕೆ. ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ, ಕೆ. ಜೆ ಜಾರ್ಜ್ – ಇಂಧನ, ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ, ರಾಮಲಿಂಗಾರೆಡ್ಡಿ- ಸಾರಿಗೆ, ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ, ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ, ಕೃಷ್ಣಬೈರೇಗೌಡ- ಕಂದಾಯ, ದಿನೇಶ್ ಗುಂಡೂರಾವ್ -ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಚಲುವರಾಯ ಸ್ವಾಮಿ- ಕೃಷಿ, ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ, ಹೆಚ್. ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ.

ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ, ಕೆಎನ್ ರಾಜಣ್ಣ- ಸಹಕಾರ, ಶರಣಬಸಪ್ಪ ದರ್ಶನಾಪುರ-ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು, ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ, ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ, ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ, ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಶರಣಪ್ರಕಾಶ ಪಾಟೀಲ- ಉನ್ನತ ಶಿಕ್ಷಣ, ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ, ಲಕ್ಷ್ಮಿ ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಹೀಂಖಾನ್- ಪೌರಾಡಳಿತ ಮತ್ತು ಹಜ್, ಡಿ- ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಹಂಚಿಕೆ ಮಾಡಲಾಗಿದೆ.

ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ, ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ, ಬೈರತಿ ಸುರೇಶ್- ನಗರಾಭಿವೃದ್ಧಿ, ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಎಂಸಿ ಸುಧಾಕರ್- ವೈದ್ಯಕೀಯ ಶಿಕ್ಷಣ, ಕೆ.ಎನ್ ರಾಜಣ್ಣ- ಸಹಕಾರ, ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ, ಎಸ್ ಎಸ್ ಮಲ್ಲಿಕಾರ್ಜುನ್- ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ, ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ ವಹಿಸಲಾಗಿದೆ.

Check Also

ಬೆಳಗಾವಿಯಲ್ಲಿ FM ರೇಡಿಯೋ ಶುರು ಮಾಡಿ…!!

ಬೆಳಗಾವಿ- ಕರ್ನಾಟಕ,ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವಬೆಳಗಾವಿಯಲ್ಲಿ ಎಫ್.ಎಂ ರೇಡಿಯೋ ಪ್ರಾರಂಭಿಸಲು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು …

Leave a Reply

Your email address will not be published. Required fields are marked *