Breaking News

ಹೆಬ್ಬಾಳಕರ್…….ನಿಂಬಾಳ್ಕರ್……!!!

ಬೆಂಗಳೂರು- ಬರಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಗೃಹ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ತಯಾರಿ ಕುರಿತು ಸಭೆ ನಡೆಯಿತು.

ಈ ಸಭೆಯಲ್ಲಿ, ಮಹಿಳಾ ವಿಭಾಗದಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಮಹಿಳೆಯರ ಸುರಕ್ಷತೆಗಾಗಿ ಹಾಗೂ ಅಭಿವೃದ್ಧಿಗಾಗಿ ಜಾರಿಗೊಳಿಸಬಹುದಾದ ಹೊಸ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, NSUI ನ ಮಾಜಿ ಅಧ್ಯಕ್ಷೆ ರುಚಿರ್ ಗುಪ್ತಾ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಮಹಿಳಾ ಸಾಧಕಿಯರು ಉಪಸ್ಥಿತರಿದ್ದರು.

ಬರುವ ಲೋಕಸಭಾ ಚುನಾವಣೆಯಲ್ಲಿ ಅಂಜಲಿ ನಿಂಬಾಳ್ಕರ್ ಕೆನರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗುವದು ನಿಶ್ಚಿತವಾಗಿದೆ ಎಂದು ಹೇಳಲಾಗುತ್ತಿದೆ.

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *