Breaking News

ಅನ್ನ ಭಾಗ್ಯದ ಅಕ್ಕಿ ಸಾಗಾಣಿಕೆ,ಪೋಲೀಸರ ದಾಳಿ ಎರಡು ಬುಲೇರೋ ಸಮೇತ ಆರೋಪಿಗಳು ವಶಕ್ಕೆ

ಬೆಳಗಾವಿ-
ಬಿಪಿಎಲ್ ಕಾರ್ಡ್ ದಾರರಿಂದ‌ ಖರೀದಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ತರುತ್ತಿದ್ದ ಪಡಿತರ ಅಕ್ಕಿಯನ್ನು ಹಿರೇಬಾಗೇವಾಡಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಿಂದ ಬೆಳಗಾವಿ ನಗರಕ್ಕೆ ತರುತ್ತಿದ್ದ ಎರಡು ಬೊಲೆರೋ ವಾಹನಗಳಲ್ಲಿ ಸಾಗಿಸುತ್ತಿದ್ದ 216ಚೀಲ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಬೆಳಗಾವಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಹಲಗಾ ಸಮೀಪದಲ್ಲಿ ಎರಡು ವಾಹನಳನ್ನ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದಾಗ ಅನ್ನ ಭಾಗ್ಯ ಅಕ್ಕಿಯನ್ನ ಕಾಳ‌ಸಂತೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದು ಗೊತ್ತಾಗಿದೆ. ಈ ಕುರಿತು ಮೂರು ಜನ ಆರೋಪಿಗಳು ಹಾಗೂ ಎರಡು ಬೊಲೆರೋ ವಾಹನ ಜಪ್ತಿ ಮಾಡಿದ್ದು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *