ಬೆಳಗಾವಿ- ಲಕ್ಷ್ಮೀ ಹೆಬ್ಬಾಳರ ಮತ್ತು ರಮೇಶ್ ಜಾರಕಿಹೊಳಿ ಗುದ್ದಾಟದ ನಡುವೆ ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲೆಗೆ ಜೋರಾಗಿ ಗುದ್ದಿದೆ,ಯಾಕಂದ್ರೆ ಈ ಮಹಾಮಾರಿ ಇಂದು ಬೆಳಗಾವಿ ಜಿಲ್ಲೆಯ ಇಪ್ಪತ್ತು ಜನರಿಗೆ ತಗಲಿದೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕಾಟ ಬಿಡುವಿಲ್ಲದೇ ಕಾಡುತ್ತಿದೆ ಇಂದು ಜಿಲ್ಲೆಯಲ್ಲಿ 20 ಸೊಂಕಿತರು ಪತ್ತೆಯಾಗಿದ್ದು ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 414 ಕ್ಕೇರಿದೆ. ತೀವ್ರ ಉಸಿರಾಟದ ತೊಂದರೆಯಿಂದ ಕೊಣ್ಣೂರ ಗ್ರಾಮದ 55 ವರ್ಷದ ಮಹಿಳೆ ಸಾವನ್ನೊಪ್ಪದ್ದು, …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ನಾನು ರಾಣಿ ಚೆನ್ನಮ್ಮನ ವಂಶಸ್ಥೆ,ಪೊಳ್ಳು ಬೆದರಿಕೆಗೆ ಹೆದರುವದಿಲ್ಲ- ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗ್ಗೆ ಗ್ರಾಮೀಣ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಮಾತನಾಡುತ್ತ, ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ ಎಂದು ಹೇಳಿಕೆ ನೀಡಿದ್ದರು. ಜೊತೆಗೆ, ಬರಲಿರುವ …
Read More »ಕೊರೋನಾ ಎದುರಿಸಲು ರೆಡಿಯಾಗಿ,- ರಮೇಶ್ ಜಾರಕಿಹೊಳಿ
ಬೆಳಗಾವಿ, ಜುಲೈ – ಮುಂಬರುವ ದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ(ಜು.7) ನಡೆದ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ಎರಡು ತಿಂಗಳು ಪ್ರಮುಖವಾಗಿರುವುದರಿಂದ …
Read More »ಲಕ್ಷ್ಮೀ ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ- ಸಾಹುಕಾರ್
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಸೊಂಕಿನಿಂದ ಇಂದು ಮತ್ತೊಬ್ಬ ಮಹಿಳೆ ಬಲಿ
ಬೆಳಗಾವಿ- ಇಂದು ಸೋಮವಾರ ಕಿಲ್ಲರ್ ಕೊರೋನಾ ಮರಣ ಮೃದಂಗ ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದಿದೆ.ಅಥಣಿ ತಾಲ್ಲೂಕಿನ ಮೊತ್ತೊಬ್ಬ ಸೊಂಕಿತ ಮಹಿಳೆ ಇಂದು ಮೃತಪಡ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಕೊರೋನಾ ಸೊಂಕಿಗೆ 6 ಜನ ಬಲಿಯಾಗಿದ್ದು ಇಂದು ಮತ್ತೊಬ್ಬ ಮಹಿಳೆ (60)/ ಬಲಿಯಾಗಿದ್ದು.ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ಮುಂದುವರೆದಿದೆ. ಅಥಣಿ ತಾಲ್ಲೂಕಿನ ಗ್ರಾಮವೊಂದರ 60 ವರ್ಷದ ಸೊಂಕಿತ ಮಹಿಳೆ ಇಂದು ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಈಗ ಖರೇ ಖರೇ ಮಹಾಮಾರಿ ವೈರಸ್ …
Read More »ಮೂರು ತಿಂಗಳಿಗೊಮ್ಮೆ,ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಮೀಟೀಂಗ್ ನಡೆಯಲಿ
ಬೆಳಗಾವಿ- ಮೂರು ತಿಂಗಳಿಗೊಮ್ಮೆ,ಬೆಳಗಾವಿಯ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಮೀಟೀಂಗ್ ನಡೆಸುವದು,ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು. ಬೆಳಗಾವಿಯ ಸುವರ್ಣಸೌಧ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿ ಆಗಬೇಕು,ಇದು ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಆಗಬೇಕು,500 ಕೋಟಿ ಖರ್ಚು ಮಾಡಿ ಕಟ್ಟಿದ ಈ ಕಟ್ಟಡ ನಿರಂತರವಾಗಿ ಕ್ರೀಯಾಶೀಲ ಆಗುವ ನಿಟ್ಟಿನಲ್ಲಿ ಸರ್ಕಾರ ರಾಜ್ಯಮಟ್ಟದ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರ ಮಾಡಬೇಕು …
Read More »ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಕಾಟ ಇಂದು ಮತ್ತೆ 11 ಜನ ಸೊಂಕಿತರ ಪತ್ತೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಕಾಟ ಬೆಂಬಿಡದೇ ಕಾಡುತ್ತಿದೆ.ಇಂದು ಮತ್ತೆ 11 ಜನ ಸೊಂಕಿತರು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 393 ಕ್ಕೇರಿದಂತಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ 11ಜನ ಸೊಂಕಿತರ ಪೈಕಿ ನಾಲ್ಕು ಜನ ಬೆಳಗಾವಿ ನಗರದವರಾಗಿದ್ದಾರೆ. ಒಬ್ಬರು ವೀರಭದ್ರ ನಗರ ಬೆಳಗಾವಿ ವಯಸ್ಸು (48) ಸಾವು ಇನ್ನೊಬ್ಬರು ಸುಭಾಷ್ ನಗರ ,ಅನಿಗೋಳ,ಹನುಮಾನ ನಗರದಲ್ಲಿ ತಲಾ ಒಂದು ಅಥಣಿ ತಾಲ್ಲೂಕು 5 ರಾಯಬಾಗ 1 …
Read More »ಕೊರೋನಾ ಸೊಂಕಿಗೆ ಬಲಿಯಾದವರ ಇಬ್ಬರ ಅಂತ್ಯಕ್ರಿಯೆ ಇನ್ನೂ ನಡೆದಿಲ್ಲ.
ಬೆಳಗಾವಿ- ಕೊರೋನಾ ಸೊಂಕಿನಿಂದ ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ನಿನ್ನೆಯ ದಿನ ಇಬ್ಬರು ಮೃತಪಟ್ಟಿದ್ದು ಮೃತರ ಅಂತ್ಯಕ್ರಿಯೆ ಇನ್ನುವರೆಗೆ ನಡೆದಿಲ್ಲ ನಿನ್ನೆ ಮದ್ಯಾಹ್ನ,ರಾಯಬಾಗ ಕುಡಚಿಯ 70 ವರ್ಷದ ವೃದ್ಧ, ನಿನ್ನೆ ಸಂಜೆ ಬೆಳಗಾವಿಯ ವೀರಭದ್ರನಗರದ 48 ವರ್ಷದ ವ್ಯೆಕ್ತಿ ಮೃತಪಟ್ಟಿದ್ದು ಇಬ್ಬರ ಶವಗಳನ್ನು,ಕೋವಿಡ್ ಮಾರ್ಗಸೂಚಿಯ ಪ್ರಕಾರ ಪ್ಯಾಕ್ ಮಾಡಲಾಗಿದೆ,ಆದ್ರೆ ಅಂತ್ಯಕ್ರಿಯೆ ಮಾಡೋದು ಯಾವಾಗ ಎಂದು ಮೃತರ ಕುಟುಂಬಸ್ಥರು ನಿನ್ನೆಯಿಂದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲೇ ಕಾಯ್ದು ಕುಳಿತಿದ್ದಾರೆ. ಈ ಕುರಿತು ಭೀಮ್ಸ್ ನಿರ್ದೇಶ …
Read More »ಬೆಳಗಾವಿ ನಗರ ಮತ್ತು ಜಿಲ್ಲೆಯಲ್ಲಿ ಖಡಕ್ ಲಾಕ್ ಡೌನ್…..!
ಬೆಳಗಾವಿ-ಬೆಳಗಿನ ಜಾವ ಪೋಲೀಸರು ಫೀಲ್ಡ್ ಗೆ ಇಳಿದಿದ್ದಾರೆ,ರಸ್ತೆಗಳ ಮೇಲೆ ವಾಹನಗಳ ಓಡಾಟ ಇಲ್ಲವೇ ಇಲ್ಲ,ಜನರಂತೂ ಕಾಣಿಸುತ್ತಿಲ್ಲ,ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣ ಬಿಕೋ ಎನ್ನುತ್ತಿದೆ.ಬೆಳಗಾವಿ ನಗರ ಮತ್ತು ಸಂಪೂರ್ಣ ಜಿಲ್ಲೆಯಲ್ಲಿ ಫುಲ್ ಖಡಕ್ ಲಾಕ್ ಡೌನ್ ಅನುಷ್ಠಾನಗೊಂಡಿರುವದು ಸತ್ಯ. ಬೆಳಗಾವಿ ನಗರದಲ್ಲಿ ಹಾಲು,ಔಷಧಿ ಅಂಗಡಿ ಹೊರತುಪಡಿಸಿದರೆ ಬೇರೆ ಯಾವ ಅಂಗಡಿಯೂ ಬಾಗಿಲು ತೆರೆದಿಲ್ಲ,ಬೆಳಗಾವಿಯ ಹೋಲ್ ಸೇಲ್ ತರಕಾರಿಯ ಎಪಿಎಂಸಿ ಮಾರುಕಟ್ಟೆಯೂ ಸಂಪೂರ್ಣವಾಗಿ ಬಂದ್ ಆಗಿದೆ.ಅಗತ್ಯ ವಸ್ತುಗಳ ಸರಕು ವಾಹನಗಳನ್ನು ಹೊರತುಪಡಿಸಿ ಬೇರೆ …
Read More »ಇಂದು ಒಂದೇ ದಿನ ಬೆಳಗಾವಿಯಲ್ಲಿ ಕೊರೋನಾ ಸೊಂಕಿಗೆ ಇಬ್ಬರು ಬಲಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮೃತ್ಯು ತಾಂಡವ ಮುಂದುವರೆದಿದ್ದು ಇಂದು ಶನಿವಾರ ಮಹಾಮಾರಿ ವೈರಸ್ ಗೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ ಮದ್ಯಾಹ್ನ ರಾಯಬಾಗ ಕುಡಚಿಯ 70 ವರ್ಷದ ಸೊಂಕಿತ ಸಾವನ್ನೊಪ್ಪಿದರೆ,ಇಂದು ರಾತ್ರಿ 9 ಗಂಟೆಗೆ ಬೆಳಗಾವಿಯ ವೀರಭದ್ರ ನಗರದ 48 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ ಇಬ್ಬರೂ ಉಸಿರಾಟದ ತೊಂದರೆಯಿಂದಾಗಿ ಭೀಮ್ಸ ಆಸ್ಪತ್ರೆಗೆ ದಾಖಲಾಗಿದ್ದರು ಒಬ್ಬ ಇಂದು ಮದ್ಯಾಹ್ನ ಮೃತಪಟ್ಟರೆ ಮೊತ್ತೊಬ್ಬ ರಾತ್ರಿ ಮೃತಪಟ್ಟಿದ್ದು ,ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ ಮತ್ತೆ 27 ಜನ ಸೊಂಕಿತರ ಪತ್ತೆ ಒಂದು ಬಲಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಕಾಟ ಇಂದು ಶನಿವಾರವೂ ಮುಂದುವರೆದಿದೆ. ಇಂದು ರಾಯಬಾಗ ಕುಡಚಿಯ ಸೊಂಕಿತ ಬಲಿಯಾಗಿದ್ದು ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 5 ಕ್ಕೇರಿದ್ದುಇಂದಿನ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ27ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಶನಿವಾರ 27 ಜನ ಸೊಂಕಿತರು ಪತ್ತೆಯಾದ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 383 ಕ್ಕೆ ಏರಿದಂತಾಗಿದೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ 27 ಜನ ಸೊಂಕಿತರ ಪೈಕಿ , ಬೆಳಗಾವಿಯ …
Read More »ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರ ಕಾರ್ಯಶೈಲಿ ಬದಲಾಗಬೇಕು- ಸತೀಶ್ ಜಾರಕಿಹೊಳಿ
ಬೆಳಗಾವಿ-ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸಲು ಪಕ್ಷ ಹಲವಾರು ಯೋಜನೆಗಳನ್ನು ರೂಪಿಸಿದೆ,ಪಕ್ಷದ ಪದಾಧಿಕಾರಿಗಳು ಕ್ರೀಯಾಶೀಲವಾಗಬೇಕು,ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರುಗಳ ಕಾರ್ಯಶೈಲಿ ಬದಲಾಗಬೇಕು ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಪಕ್ಷದ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು. ಕೆಪಿಸಿಸಿ ಕಾರ್ಯಾದ್ಯಕ್ಷರಾಗಿ ಪದಗ್ರಹಣ ಮಾಡಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಅವರನ್ನು ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಅದ್ಧೂರಿ ಯಾಗಿ ಸ್ವಾಗತಿಸಿ ಸತ್ಕರಿಸಿದರು.ಕಾರ್ಯಕರ್ತರಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದ …
Read More »ಬೆಳಗಾವಿಯ ಬಳೆ ತೊಡಿಸುವ ಮಹಿಳೆಗೂ ಕೊರೋನಾ,
ಬೆಳಗಾವಿ- ಪ್ರತಿ ದಿನ ಗಲ್ಲಿ ಗಲ್ಲಿಗಳಲ್ಲಿ ಸುತ್ತಾಡಿ ಬಳಿ ತೊಡಿಸುವ 58 ವರ್ಷದ ಬಳಿಗಾರ ಮಹಿಳೆಗೂ ಸೊಂಕು ತಗಲಿದ್ದು ಮಹಿಳೆಯ ಪ್ರಾಥಮಿಕ ಸಂಪರ್ಕ ದಲ್ಲಿ ಬಂದವರನ್ನು ಪತ್ತೆ ಮಾಡಲು ಅಧಿಕಾರಿಗಳು ಸುಸ್ತಾಗಿ ಹೋಗಿದ್ದಾರೆ. ಬೆಳಗಾವಿ ನಗರ ಮಾಳಿ ಗಲ್ಲಿಯ 58 ವರ್ಷದ ಬಳಿಗಾರ ಮಹಿಳೆ ಪ್ರತಿ ದಿನ ನಗರದ ಗಲ್ಲಿ ಗಲ್ಲಿ ಗಳಲ್ಲಿ ಸುತ್ತಾಡಿ 200 ಕ್ಕೂ ಹೆಚ್ಚು ಮನೆಗಳ ಮಹಿಳೆಯರಿಗೆ ಬಳೆ ತೊಡೆಸಿದ್ದಾಳೆ ಎಂದು ತಿಳಿದು ಬಂದಿದ್ದು ಈ …
Read More »ಬೆಳಗಾವಿ ಮೂವರು ಡಿಆರ್ ಪೋಲೀಸರಿಗೂ ಕೊರೋನಾ ಸೊಂಕು
ಬೆಳಗಾವಿ- ನಿಪ್ಪಾಣಿಯ ಕುಗನೊಳ್ಳಿ,ರಾಯಬಾಗ ಸೇರಿದಂತೆ ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ ಮೂವರು ಪೋಲೀಸ್ ಪೇದೆಗಳಿಗೆ ಕೊರೋನಾ ಸೊಂಕು ಇರುವದು ದೃಡವಾದ ಹಿನ್ನಲೆಯಲ್ಲಿ ಮೂವರನ್ನು ಐಸೋಲೇಟ್ ಮಾಡಲಾಗಿದೆ. ಸೊಂಕು ಪತ್ತೆಯಾದ ಮೂವರು ಡಿ ಆರ್ ಪೇದೆಗಳು ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ್ದು ಈ ಮೂವರು ಪೇದೆಗಳು ಬೆಳಗಾವಿ ನಗರದ ಪೋಲೀಸ್ ಹೆಡ್ ಕ್ವಾಟರ್ಸ್ ನಲ್ಲಿ ವಾಸವಾಗಿದ್ದರು. ಈ ಮೂವರು ಪೋಲೀಸ್ ಪೇದೆಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು …
Read More »ಇಂದು ರಾತ್ರಿ 8 ಗಂಟೆಯಿಂದ ಖಡಕ್ ಲಾಕ್ ಡೌನ್……!
ಬೆಳಗಾವಿ-ಗಡಿಭಾಗದ ಬೆಳಗಾವಿಯಲ್ಲಿ ಕೊರೋನಾ ಮಹಾಮಾರಿಯ ಮೃತ್ಯು ತಾಂಡವ ಮುಂದುವರೆದಿದ್ದು ಈ ಮಹಾಮಾರಿಗೆ ಲಗಾಮು ಹಾಕಲು ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ,ಬೆಳಗಾವಿ ನಗರ ಮತ್ತು ಇಡೀ ಜಿಲ್ಲೆಯಲ್ಲಿ ಖಡಕ್ ಕರ್ಪ್ಯು ಜಾರಿ ಮಾಡಲು ಪೋಲೀಸರು ಸಜ್ಜಾಗಿದ್ದಾರೆ. ಇಂದು ಶನಿವಾರ ರಾತ್ರಿ 8 ಗಂಟೆಗೆ ಪೋಲೀಸರು ಫೀಲ್ಡ್ ಗೆ ಇಳಿಯಲಿದ್ದಾರೆ.ನಾಳೆ ಸಂಡೇ ಇಡೀ ದಿನ ಅವಶ್ಯಕವಾಗಿ ಯಾರಾದ್ರೂ ಮನೆಯ ಗೇಟು ತೆಗೆದು ಹೊರಗೆ ಸುತ್ತಾಡಿದ್ರೆ ಪೋಲೀಸರ ಏಟು …
Read More »