Breaking News

LOCAL NEWS

ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಪಾವತಿಸಲು ಕಾರ್ಖಾನೆಗಳಿಗೆ ಗಡುವು

ಬಡ್ಡಿ ಸಮೇತ ಬಾಕಿ ಮೊತ್ತ ಪಾವತಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ- ರೈತರ ಕಬ್ಬಿನ ಬಾಕಿ ಬಿಲ್ಲುಗಳನ್ನು ಜೂ.25ರೊಳಗಾಗಿ ಪಾವತಿಸುವಂತೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ‌ ನಿತೇಶ ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬುಧವಾರ (ಜೂ.19) ಜರುಗಿದ ಕಬ್ಬು ಬೆಳೆಗಾರರ ಹಾಗೂ ಸಕ್ಕರೆ ಕಾರ್ಖಾನೆಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 28 ಸಕ್ಕರೆ‌ ಕಾರ್ಖಾನೆಗಳಿದ್ದು, ಈ ಪೈಕಿ …

Read More »

ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಶೀಲಿಸಿದ ಸಂಸದ ಜಗದೀಶ್ ಶೆಟ್ಟರ್….

*ಸಂಸದ ಜಗದೀಶ ಶೆಟ್ಟರ ಅವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ‌ ಪರಿಶೀಲನೆ* ಬೆಳಗಾವಿ: ಇಲ್ಲಿನ ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಕಛೇರಿಗೆ ಸಂಸದರಾದ ಶ್ರೀ.‌ ಜಗದೀಶ ಶೆಟ್ಟರ ಇವರು ಭೇಟಿನೀಡಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸದರಿ ಸಭೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ವಿವರವನ್ನು ಹಾಗೂ ಸಧ್ಯದ ಸ್ಥಿತಿಗತಿಯ ಮಾಹಿತಿಯನ್ನು ಸಂಸದರು ಪಡೆದುಕೊಂಡರು. ಇದಲ್ಲದೇ ಈಗಾಗಲೇ ಬಹುತೇಕ ಕಾಮಗಾರಿಗಳು ಮುಕ್ತಾಯಗೊಂಡಿದ್ದು ಮಹಾನಗರ ಪಾಲಿಕೆ‌ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಕಾಮಗಾರಿಗಳನ್ನು …

Read More »

ಬೆಳಗಾವಿ, ವಂದೇ ಭಾರತ್ ರೈಲಿಗಾಗಿ ಹುಬ್ಬಳ್ಳಿಯಲ್ಲಿ ಮೀಟೀಂಗ್…!!

ಬೆಳಗಾವಿ:- ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರ ಕಛೇರಿಯಲ್ಲಿ ಇಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರು ಬೆಳಗಾವಿ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಪಟ್ಟಂತಹ ವಿಷಯಗಳ ಕುರಿತು ಪ್ರಧಾನ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ವಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು ಇರುವ ತೊಡಕುಗಳು ಹಾಗೂ ಅದರ ನಿವಾರಣೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಹಾಗೂ ಆದಷ್ಟು …

Read More »

ಮೂರು ಮಕ್ಕಳನ್ನು ಬಿಟ್ಟು,ಮತ್ತೊಂದು ಮದುವೆ …..!!

ಬೆಳಗಾವಿ- 10,15-19 ವರ್ಷ ವಯಸ್ಸಿನ ಮೂರು ಜನ ಗಂಡ ಮಕ್ಕಳು,ತಂದೆ ಮೃತಪಟ್ಟ ಬಳಿಕ ತಾಯಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ, ನೌಕರಿ ಸಿಕ್ಕ ಮೇಲೆ ಮೂರು ಜನ ಮಕ್ಕಳನ್ನು ಬಿಟ್ಟು ತಾಯಿ ಬೇರೊಬ್ಬನ ಜೊತೆ ಮದುವೆಯಾಗಿದ್ದು,ತಾಯಿ ಇದ್ದರೂ ಅನಾಥವಾಗಿರುವ ಮೂರು ಜನ ಮಕ್ಕಳು ಈಗ ನಮ್ಮ ತಾಯಿಯನ್ನು ನಮಗೆ ಕೊಡಿ ಎಂದು ಪೋಲೀಸ್ ಠಾಣೆಯ ಮೆಟ್ಟಲೇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಗಣೇಶ್ ಪೂರದಲ್ಲಿ ಸುಖವಾಗಿದ್ದ ಸಂಸಾರದಲ್ಲಿ ಲವ್ ಈ …

Read More »

ಸಮಸ್ಯೆಗೆ ಸ್ಪಂದಿಸುವ ಮೂಲಕ ,ಸಂಸದೆ ಪ್ರಿಯಾಂಕಾ ಪರ್ವ ಆರಂಭ..

ಹಂತ, ಹಂತವಾಗಿ ಜನರ ಸಮಸ್ಯೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಜನರ ಸಮಸ್ಯೆಗಳನ್ನು ಹಂತ, ಹಂತವಾಗಿ ಈಡೇರಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭರವಸೆ ನೀಡಿದರು. ಕವಟಗಿಮಠ ನಗರದ ಸ್ವ-ಗ್ರಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಜಯಗಳಿಸಿದ ಬಳಿಕ ಮೊದಲ ಬಾರಿಗೆ ನಾನು ಚಿಕ್ಕೋಡಿಯ ನಗರದ ಸ್ವ-ಗ್ರಹದಲ್ಲಿ ಜನತೆಯ ಸಮಸ್ಯೆಗಳನ್ನು ಆಲಿಸಿ, ಮನವಿಗಳನ್ನು ಸ್ವೀಕರಿಸಿದ್ದೇನೆಂದು ತಿಳಿಸಿದರು. ಚಿಕ್ಕೋಡಿ ಕ್ಷೇತ್ರದ …

Read More »

ಕೋಳಿ ಬೆಸ್ತ ಸಮಾಜ ಎಸ್ಟಿ ಸೇರ್ಪಡೆಗಾಗಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ ಜಾರಕಿಹೊಳಿ

  ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ ಸಮಾಜದಿಂದ ಮಹಿಳಾ ಸಮಾವೇಶ-ಚಿಕ್ಕೋಡಿ ಲೋಕಸಭೆ ಸದಸ್ಯೆ ಪ್ರಿಯಂಕಾ ಜಾರಕಿಹೊಳಿಗೆ ಸನ್ಮಾನ ಹುಕ್ಕೇರಿ: ಕೋಳಿ ಬೆಸ್ತ ಸಮಾಜವನ್ನು ಎಸ್ಟಿ ಸಮಾಜಕ್ಕೆ ಸೇರಿಸುವುದಕ್ಕಾಗಿ ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ ಎಂದು ಚಿಕ್ಕೋಡಿ ಲೋಕಸಭೆ ಸದಸ್ಯೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿರುವ ಮನೀಷ ಇಂಟನ್ಯಾಷನಲ್ ಹೋಟೆಲ್ ಬಳಿಯ ಎಸ್ ಎಸ್ ಕನ್ವೆನ್ಷನ್ ಹಾಲ್ ನಲ್ಲಿ ಕೋಳಿ ಬೆಸ್ತ ಸಮಾಜ ಜಿಲ್ಲಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ …

Read More »

ಸರ್ನೋಬತ್ ದಂಪತಿಗಳ “ನೀಯತ್ತು.”.. ಅಸಹಾಯಕರಿಗೆ ತಾಕತ್ತು…..!!!

ಬೆಳಗಾವಿ – ಬೆಳಗಾವಿಯಲ್ಲಿ ಡಾ.ಸರ್ನೋಬತ್ ದಂಪತಿಗಳು ನೀಯತಿ ಫೌಂಡೇಶನ್ ಮೂಲಕ ಸದ್ದಿಲ್ಲದೇ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದು ಆರ್ಥಿಕವಾಗಿ ದುರ್ಬಲವಾಗಿರುವ ಶಾಲಾ ಮಕ್ಕಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಡಾ.ಸೋನಾಲಿ ಸರ್ನೋಬತ್ ಡಾ.ಸಮೀರ್ ಸರ್ನೋಬತ್ ದಂಪತಿಗಳು ನೀಯತಿ ಎಂಬ ಫೌಂಡೇಶನ್ ಮೂಲಕ ಈಗಾಗಲೇ 200 ಕ್ಕೂ ಹೆಚ್ಚು ಅಸಹಾಯಕ ವಿಧ್ಯಾರ್ಥಿಗಳ ಶಿಕ್ಷಣಕ್ಕಾಗಿ ಆರ್ಥಿಕವಾಗಿ ಸಹಾಯ ಮಾಡುವದರ ಜೊತೆಗೆ ಅನೇಕ ಕುಟುಂಬಗಳಿಗೆ ಹೊಲಿಗೆ ಯಂತ್ರಗಳನ್ನೂ ಸಹ ಕೊಟ್ಟಿದ್ದಾರೆ. …

Read More »

ಕಾಲೇಜು ಬಸ್ಸಿಗೆ ಲಾರಿ ಡಿಕ್ಕಿ, 40 ಕ್ಕೂ ಹೆಚ್ಚು ವಿಧ್ಯಾರ್ಥಿಗಳಿಗೆ ಗಾಯ….

ಬೆಳಗಾವಿ ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಅಪಘಾತ ನಡೆದಿದ್ದು, ಸುಮಾರು 40 ಕ್ಕೂ ವಿದ್ಯಾರ್ಥಿಗಳಿಗೆ ಗಾಯವಾದ ಘಟನೆಯ ಶುಕ್ರವಾರ ಸಂಜೆ ಭೂತರಾಮನಹಟ್ಟಿಯ ಕಿರು ಮೃಗಾಲಯದಲ್ಲಿ ಎದುರು ನಡೆದಿದೆ. ಕೊಲ್ಹಾಪುರದಿಂದ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಧಾರವಾಡ ವಿಶ್ವವಿದ್ಯಾಲಯ ನೋಡಿಕೊಂಡು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮೀಪ ಇರುವ ರಾಣಿ ಚನ್ನಮ್ಮ‌ ಕಿರು ಮೃಗಾಲಯಕ್ಕೆ ಭೇಟಿ ನೀಡಿ ಮರಳಿ ಕೊಲ್ಲಾಪುರಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಗಾಯಾಳು ವಿದ್ಯಾರ್ಥಿಗಳು ಬೆಳಗಾವಿ ‌ಬೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ …

Read More »

ಇಂದಿನಿಂದ ಬೆಳಗಾವಿಯಲ್ಲಿ ಶೆಟ್ರ ಅಂಗಡಿ ಓಪನ್…!!

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಜಯಭೇರಿ ಸಾಧಿಸಿ ಸಂಸದರಾಗಿ ಆಯ್ಕೆಯಾಗಿ, ದೆಹಲಿಗೆ ಹೋಗಿ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಬೆಳಗಾವಿಗೆ ಮರಳಿ ಬಂದಿರುವ ಜಗದೀಶ್ ಶೆಟ್ಟರ್ ಅವರು ಸೇವಾ ಅವಧಿಯ ಮೊದಲ ದಿನ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಗೆಲುವಿಗೆ ಶ್ರಮಿಸಿದ ಎಲ್ಲ ನಾಯಕರಿಗೆ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ ಬಳಿಕ ಮೊದಲ ದಿನವೇ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ತೆರಳಿ ಅಲ್ಲಿಯ ಅಧಿಕಾರಿಗಳ ಜೊತೆ ಸಭೆ …

Read More »

ಬೆಳಗಾವಿಯ ಕೋರ್ಟ್ ನಲ್ಲೇ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಆರೋಪಿ…

ಬೆಳಗಾವಿ-ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಆರೋಪಿಯೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ. ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳಗಾವಿಯಲ್ಲಿ ಓಪನ್ ಕೋರ್ಟಿನಲ್ಲಿ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದಂತೆ ವಕೀಲರು,ಹಾಗು ಕೋರ್ಟಿನಲ್ಲಿದ್ದ ಸಾರ್ವಜನಿಕರು ಘೋಷಣೆ ಕೂಗಿದ ಆರೋಪಿಗೆ ಧರ್ಮದೇಟು ನೀಡಿದ್ದಾರೆ ಥಳಿಸಿ ಆತನಿಗೆ ಪಾಠ ಕಲಿಸಿದ್ದಾರೆ. ಕೋರ್ಟ್ ಒಳ ಭಾಗದಲ್ಲೇ ಸಾರ್ವಜನಿಕರು ವಕೀಲರು ಘೋಷಣೆ ಕೂಗಿದವನ ಮೇಲೆ ತಕ್ಷಣವೇ ದಾಳಿ ಮಾಡಿ ಆತನಿಗೆ ಧರ್ಮದೇಟು.ಏಟು …

Read More »

ಸ್ಯಾಂಡಲ್ ವುಡ್ ಸ್ಟಾರ್ ದರ್ಶನ್ ಬಂಧನ

ಮೈಸೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅವರನ್ನ ಬಂಧಿಸಲಾಗಿದೆ ಎನ್ನಲಾಗಿದೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದನು. ಈ ಕಾರಣಕ್ಕೆ ನಟ ದರ್ಶನ್ ಸೂಚನೆ ಮೇರೆಗೆ ಅವರ ಗೆಳೆಯಲು ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದರು ಎಂದು ಹೇಳಲಾಗುತ್ತಿದೆ. …

Read More »

ಬೈಕ್ ಮೇಲೆ ಮರ ಬಿದ್ದು ಯುವಕನ ಸಾವು,ಇಬ್ಬರಿಗೆ ಗಾಯ

ಬೆಳಗಾವಿ- ಬೈಕ್ ಮೇಲೆ ಗೆಳೆಯರು ಸೇರಿಕೊಂಡು ಪಕ್ಕದ ಊರಿಗೆ ಹೋಗುವಾಗ ರಸ್ತೆ ಪಕ್ಕದ ಅಕೇಶಿಯಾ ಮರ ಬೈಕ್ ಮೇಲೆ ಬಿದ್ದು 20 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಪಕ್ಕದ ಬೆಳಗುಂದಿ ಕರ್ಲೆ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದ್ದು ಬೈಕ್ ಮೇಲೆ ಮರ ಬಿದ್ದ ಪರಿಣಾಮ 20 ವರ್ಷದ ಸೋಮನಾಥ ಮುಚ್ಚಂಡಿಕರ್ ಸ್ಥಳದಲ್ಲೇ ಸಾವನ್ನೊಪ್ಪಿದ್ದಾನೆ. ಸ್ವಪ್ನೀಲ್ ದೇಸಾಯಿ,ವಿಠ್ಠಲ ತಳವಾರ …

Read More »

ಜೈ..ಜಗದೀಶ್ ಹರೇ..ಶೆಟ್ಟರ್ ಮಂತ್ರಿ ಆಗೋದು ಖರೇ…!!

ಬೆಳಗಾವಿ- ಜಗದೀಶ್ ಶೆಟ್ಟರ್ ಅವರಿಗೆ ಭರ್ಜರಿಯಾಗಿ ಬೆಳಗಾವಿಯ ಜನ ಗೆಲ್ಲಿಸಿದ್ದಾರೆ‌. ಶೆಟ್ಟರ್ ಅವರಿಗೆ ಬೆಳಗಾವಿ ಲಕ್ಕಿ ಯಾಕಂದ್ರೆ ಬೆಳಗಾವಿಯಿಂದ ಗೆದ್ದಿರುವ ಶಟ್ಟರ್ ಕೇಂದ್ರದ ಮಂತ್ರಿ ಆಗುವ ಎಲ್ಲ ಲಕ್ಷಣಗಳಿವೆ. ನರೇಂದ್ರ ದಾಮೋದರ್ ದಾಸ್ ಮೋದಿ ಅವರು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ಮೋದಿ ಅವರ ಜೊತೆ ಎಷ್ಟು ಜನ ಮಂತ್ರಿಗಳು ಪ್ರಮಾಣ ವಚನ ಸ್ವೀಕಾರ ಮಾಡ್ತಾರೆ, ಅದರಲ್ಲೂ ಕರ್ನಾಟಕದಿಂದ ಎಷ್ಟು ಜನ ಮಂತ್ರಿ ಆಗ್ತಾರೆ ಎನ್ನುವ …

Read More »

ನೀಟ್ ಪರೀಕ್ಷೆಯಲ್ಲಿ 647 ಅಂಕ ಪಡೆದ ಕೆಎಲ್ಇ ವಿಧ್ಯಾರ್ಥಿ…

ಬೆಳಗಾವಿ- ಕೆಎಲ್ಇ ಸಂಸ್ಥೆಯ ಆರ್.ಎಲ್.ಎಸ್‌. ಪದವಿ ಪೂರ್ಕಾಲೇಜಿನ ವಿದ್ಯಾರ್ಥಿ ಪ್ರದೀಪ ಹಳ್ಳೂರ ಎಂಬ ವಿದ್ಯಾರ್ಥಿ ಬಡನದ ನಡುವೆಯೂ ನೀಟ್ ಪರೀಕ್ಷೆಯಲ್ಲಿ 647 ಅಂಕ ಪಡೆದಿದ್ದಾನೆ‌. ಅವನಿಗೆ ಕೆಎಲ್ಇ ಸಂಸ್ಥೆಯು ಈ ವಿದ್ಯಾರ್ಥಿಗೆ ಶಿಷ್ಯ ವೇತನ ನೀಡಿ ಪ್ರೋತ್ಸಾಹಿಸಿದೆ ಎಂದು ಕೆಎಲ್ಇ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು ಶನಿವಾರ ಕೆಎಲ್ಇ ಆರ್ ಎಲ್ ಎಸ್ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ‌ ವರ್ಷ ನೀಟ್ ಪರೀಕ್ಷೆಯಲ್ಲಿ ಕೆಎಲ್ಇಯ 600ಕ್ಕಿಂತಲೂ ಹೆಚ್ಚಿಗೆ …

Read More »

ಪ್ರಾಣ ಭಯದಲ್ಲೇ ಮೈದುಂಬಿ ಹರಿಯುತ್ತಿರುವ ಹಳ್ಳ ದಾಟುತ್ತಿರುವ ಮಕ್ಕಳು*

*ಪ್ರಾಣ ಭಯದಲ್ಲೇ ಮೈದುಂಬಿ ಹರಿಯುತ್ತಿರುವ ಹಳ್ಳ ದಾಟುತ್ತಿರುವ ಮಕ್ಕಳು* ರಠಮದುರ್ಗ- ಜೀವದ ಹಂಗು ತೊರೆದು ಹಳ್ಳದಲ್ಲೇ ನಿಂತು ಮಕ್ಕಳನ್ನು ಆ ಕಡೆಯಿಂದ ಈ ಕಡೆಗೆ ಶಿಫ್ಟ್ ಮಾಡ್ತಿರುವ ಪೋಷಕರು. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉಡಚಮ್ಮನಗರ ಗ್ರಾಮದ ಹೊರ ವಲಯದಲ್ಲಿ ಘಟನೆ. ಅದೇ ಗ್ರಾಮದ ಲಕ್ಷ್ಮಿ ನಗರದಿಂದ ಉಡಚಮ್ಮನಗರ ಸರ್ಕಾರಿ ಶಾಲೆಗೆ ಹೋಗುವ ಮಕ್ಕಳು. ಹಳ್ಳದಲ್ಲಿ ಹರಿಯುವ ನೀರು ರಭಸವಾದ್ರೆ ಪೋಷಕರ ಜೊತೆಗೆ ಮಕ್ಕಳು ಕೊಚ್ಚಿಕೊಂಡು ಹೋಗುವ ಭೀತಿ. ಲಕ್ಷ್ಮಿ …

Read More »