Breaking News

ಬೆಳಗಾವಿಯಿಂದ ಮೈಸೂರಿಗೆ ರೈಲು : ಈರಣ್ಣಾ ಕಡಾಡಿ ಕಮಾಲು…!!

ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಏಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಗುರುವಾರ ಸೆ-07 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಮುಂಜಾನೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ. ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಏಕ್ಸಪ್ರೆಸ್ ರೈಲು ತನ್ನ ಸಂಚಾರ ಆರಂಭಿಸಲಿದೆ ಎಂದರು.

ನನ್ನ ಮನವಿಗೆ ಸ್ಪಂದಿಸಿ ಬೆಳಗಾವಿ-ಮೈಸೂರು ಏಕ್ಸಪ್ರೆಸ್ ರೈಲು ಪ್ರಾರಂಭಿಸಲು ಅನುಮತಿ ನೀಡಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸಿದರು.

Check Also

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಪ್ರೀಯಾಂಕಾ ಗಾಂಧಿ

ಬೆಳಗಾವಿ- ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಶೇಷ ವಿಮಾನ ಮೂಲಕ ಆಗಮಿಸಿದ ಪ್ರೀಯಾಂಕಾ ಗಾಂಧಿ ಅವರನ್ನು …

Leave a Reply

Your email address will not be published. Required fields are marked *