ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ರಮೇಶ್ ಜಾರಕಿಹೊಳಿ,ಪ್ರಥಮ ಸಭೆ

ವಿಶ್ವೇಶ್ವರಯ್ಯ ಜಲ ನಿಗಮದ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಕಾಮಗಾರಿಗಳ ಕುರಿತಂತೆ ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ವರ್ಷದ ಕೊನೆಯ ಭಾಗದ ಒಳಗಾಗಿ ರೈತರಿಗೆ ಕೃಷಿಗೆ ಮತ್ತು ಜನರಿಗೆ ಕುಡಿಯುವ ನೀರು ಒದಗಿಸಲು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸಚಿವರು ಸೂಚಿಸಿದರು. ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ನಿಗಮದ ಎಂಡಿ ಲಕ್ಷ್ಮಣ್ ರಾವ್ ಪೇಶ್ವೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *