ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ.
ಬೆಂಗಳೂರು ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ ಎಕ್ಸಪ್ರೆಸ್ ರೈಲು” ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತಾದ ನಮ್ಮ ಬೇಡಿಕೆಯ ಬದಲು, ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್ ರೈಲು ಚಲಿಸಲಾಗುವ ಕುರಿತು ಅಗತ್ಯ ಅನುಮೋದನೆ / ಆದೇಶ ನೀಡಿರುವ ಬಗ್ಗೆ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ ಇವರು ತಿಳಿಸಿರುವುದಾಗಿ ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳು ಶ್ರೀ ಜಗದೀಶ ಶೆಟ್ಟರ ಇವರು ತಿಳಿಸುತ್ತಾ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು- ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ ಎಕ್ಸಪ್ರೆಸ್ ರೈಲು ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತು ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ಕೇಂದ್ರ ರೇಲ್ವೆ ರಾಜ್ಯ ಸಚಿವರು ಶ್ರೀ ವಿ. ಸೋಮಣ್ಣ ಇವರೊಂದಿಗೆ ಹಲವು ಬಾರಿ ಸಭೆಯನ್ನು / ಚರ್ಚೆಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಇವರ ಉಪಸ್ಥಿತಿಯಲ್ಲಿ ನಡೆದಿದ್ದು ಮತ್ತು ವತ್ತಾಯಿಸಿದ್ದು ಇಲ್ಲಿ ಸ್ಮರಣೀಯ.
ಆದರೆ ಪ್ರಸ್ತಾಪಿತ ವಿಷಯವಾಗಿ ಬೆಳಗಾವಿ-ಬೆಂಗಳೂರು ನಡುವೆ ಬೆಳಗಾವಿ ನಗರದಿಂದ ಹೊಸ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರವನ್ನು ಬೆಳ್ಳಿಗ್ಗೆ ಪ್ರಾರಂಭಿಸಿ ಬೆಂಗಳೂರು ತಲುಪಿ ತದನಂತರ ಮದ್ಯಾಹ್ನ ಬೆಂಗಳೂರಿನಿಂದ ಹೊರಟು ರಾತ್ರಿ ಬೆಳಗಾವಿ ತಲುಪುವ ಬಗ್ಗೆ ವಿಷಯ ತಿಳಿದು ಬಂದಿದೆ.
ನೂತನ ವಂದೇ ಭಾರತ ಎಕ್ಸಪ್ರೆಸ್ ರೈಲು ಸೇವೆಯನ್ನು ಬೆಳಗಾವಿಯಿಂದ ಪ್ರಾರಂಭಿಸುವ ವಿಷಯವಾಗಿ ಅಗತ್ಯ ಅನುಮೋದನೆ ನೀಡಿರುವ ಬಗ್ಗೆ ಮೋದಲನೆಯದಾಗಿ ಮಾನ್ಯ ಪ್ರಧಾನ ಮಂತ್ರಿಗಳು ಶ್ರೀ ನರೇಂದ್ರ ಮೋದಿ ಅವರಿಗೆ, ಮಾನ್ಯ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಇವರಿಗೆ, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಇವರಿಗೆ ಹಾಗೂ ಕೇಂದ್ರ ರೇಲ್ವೆ ರಾಜ್ಯ ಸಚಿವರು ಶ್ರೀ ವಿ. ಸೋಮಣ್ಣ ಇವರಿಗೆ ಅಭಿನಂದನೆಗಳನ್ನು ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಇವರು ತಿಳಿಸಿದ್ದಾರೆ.
ಅದರಂತೆ ಅದಷ್ಟು ಬೇಗನೆ ಈ ಸೇವೆಯನ್ನು ಪ್ರಾರಂಭಿಸುವ ಬಗ್ಗೆ ದಿನಾಂಕ ಒಂದನ್ನು ನಿಗಧಿ ಪಡಿಸಿ ಬೆಳಗಾವಿ ಜಿಲ್ಲಾ ರಹವಾಸಿಗಳಿಗೆ ಅನಕೂಲತೆ ಕಲ್ಪಿಕೋಡುವಂತೆ ಕೇಂದ್ರ ರೇಲ್ವೆ ಸಚಿವರಿಲ್ಲಿ ವಿನಂತಿಸಿರುತ್ತಾರೆ.