ದಿಢೀರ್‌ ಬೆಳಗಾವಿಗೆ ಜಗದೀಶ್ ಶೆಟ್ಟರ್ ಎಂಟ್ರಿ…!!

ಬೆಳಗಾವಿ- ಇಂದು ಮಧ್ಯಾಹ್ನ ಬಿಜೆಪಿ ಮುಖಂಡ ಪ್ರಭಾಕರ್ ಕೋರೆ ಅವರ ಮನೆಯಲ್ಲಿ ಬೆಳಗಾವಿ ಜಿಲ್ಲೆಯ ಅತೃಪ್ತ ಬಿಜೆಪಿ ನಾಯಕರ ಹೈ- ಪವರ್ ಮೀಟೀಂಗ್ ನಡೆದ ಬೆನ್ನಲ್ಲಿಯೇ ಸೂರ್ಯ ಮುಳುಗಿ ಕತ್ತಲು ಆವರಿಸುತ್ತಿದ್ದಂತೆಯೇ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ದಿಢೀರ್ ಬೆಳಗಾವಿಗೆ ಆಗಮಿಸಿದ್ದಾರೆ.

ಇಂದು ಮಧ್ಯಾಹ್ನ ಬಿಜೆಪಿ ಹಿರಿಯ ಮುಖಂಡ ಪ್ರಭಾಕರ್ ಕೋರೆ ಅವರ ನಿವಾಸದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನೀಲ ಬೆನಕೆ,ಎಂ.ಬಿ ಝಿರಲಿ ಸೇರಿದಂತೆ ಹಲವಾರು ಜನ ಬಿಜೆಪಿ ನಾಯಕರು ಸಭೆ ಸೇರಿ ಬೇರೆ ಜಿಲ್ಲೆಯ ನಾಯಕರಿಗೆ ಬೆಳಗಾವಿಯಿಂದ ಟಿಕೆಟ್ ಕೊಡಬಾರ್ದು ಸ್ಥಳೀಯ ನಾಯಕರಿಗೆ ಟಿಕೆಟ್ ಕೊಡಬೇಕು ಎನ್ನುವ ಬೇಡಿಕೆ ಇಟ್ಟಿದ್ದು,ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ದೆಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ ಹಿನ್ನಲೆಯಲ್ಲಿ ಜಗದೀಶ್ ಶೆಟ್ಟರ್ ಬೆಳಗಾವಿಗೆ ಆಗಮಿಸಿದ್ದಾರೆ.

ಜಗದೀಶ್ ಶೆಟ್ಟರ್ ಅವರು ಈಗ ಸದ್ಯ ಬೆಳಗಾವಿ ನಗರದಲ್ಲಿ ಇದ್ದು ಇಲ್ಲಿ ಯಾರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಜಗದೀಶ್ ಶೆಟ್ಟರ್ ನಾಳೆ ಬೆಳಗ್ಗೆ ಬೆಳಗಾವಿಯ ಬಿಜೆಪಿ ನಾಯಕರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *