Breaking News

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣ ವಸ್ತಾರೆ ನಿಧನ!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾದರು.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು

ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, 2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು.

90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಅಪರ್ಣ ಕಾರ್ಯ ನಿರ್ವಹಿಸಿದ್ದರು.

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *