ಕಾಂತಾರಾ 2 ಚಿತ್ರ ಮಾಡುವ ಬಗ್ಗೆ ದೈವ ಹೇಳಿದ್ದೇನು ಗೊತ್ತಾ..??

ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಪಡೆದು ಕಾಂತಾರಾ 2 ಮಾಡಿ…

ಕಾಂತಾರ 2 ಸಿನಿಮಾ ಮಾಡಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳುವಂತೆ ದೈವ ನುಡಿದಿರುವುದಾಗಿ ದೈವ ನರ್ತಕ ಉಮೇಶ್ ಪಂಬದ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ‘ತಿಂಗಳ ಮೊದಲು ರಿಷಬ್ ಶೆಟ್ಟಿ ಹರಕೆ ನೇಮ ಕೊಡುವುದಾಗಿ ಹೇಳಿ ವೀಳ್ಯ ಕೊಟ್ಟಿದ್ದರು. ಮೊನ್ನೆ ರಿಷಬ್ ಮತ್ತು ಅವರ ತಂಡ ಬಂದು ದೈವದ ಹರಕೆ ಕೊಟ್ಟರು. ಚೆಂದದಿಂದ ದೈವ ಹರಕೆ ಸ್ವೀಕರಿಸಿ ಅವರಿಗೆ ಅಭಯ ಕೊಟ್ಟಿದೆ. ನಮಗೆ ಅವರ ಪರಿಚಯ ಇರಲಿಲ್ಲ, ನಡೆಸಿಕೊಟ್ಟವರು ಮಡಿವಾಳ ಕುಟುಂಬದವರು. ದೈವದ ನಡೆಯಲ್ಲಿ ಆದ ವಿಷಯ ನನಗೆ ಗೊತ್ತಿರಲ್ಲ, ಅದು ದೈವಕ್ಕೆ ‌ಮಾತ್ರ ಗೊತ್ತಿರುತ್ತೆ. ದೈವದ ನೇಮೋತ್ಸವ ಆದ ನಂತರ ನನಗೆ ಭಕ್ತರು ಬಂದು ಈ ಬಗ್ಗೆ ಹೇಳಿದರು’ ಎಂದರು.

ಕಾಂತಾರ 2 ಸಿನಿಮಾ ಅನುಮತಿ ಬಗ್ಗೆ ಮಾತನಾಡಿದ ಉಮೇಶ್, ‘ಕಾಂತಾರ 2 ಸಿನಿಮಾ ‌ಮಾಡಲು ದೈವ ಅನುಮತಿ ಕೊಟ್ಟಿದೆ ಅಂತ ನನಗೆ ಭಕ್ತರು ಹೇಳಿದರು. ರಿಷಬ್ ಶೆಟ್ಟಿ ಎರಡನೇ ಭಾಗದ ಬಗ್ಗೆ ದೈವದ ಬಳಿ ಕೇಳಿದರು. ಆದರೆ ಅದಕ್ಕೆ ಮೊದಲು ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಕೇಳಲು ದೈವ ಹೇಳಿದೆಯಂತೆ.

ಬಹಳ ಆಲೋಚನೆಯಲ್ಲಿ ಮುಂದಿನ ಸಿನಿಮಾ ಮಾಡಿ ಅಂತ ದೈವ ಹೇಳಿದೆಯಂತೆ. ಮೊದಲ ಚಿತ್ರದಲ್ಲಿ ಒಳ್ಳೆಯದು ಆಗಿದೆ, ಅಪವಾದವೂ ಬಂದಿದೆ. ಹತ್ತು ಹೆಜ್ಜೆ ಇಟ್ಟು ಆ ಸಿನಿಮಾ ‌ಮಾಡಿದ್ದೀರಿ, ಇದಕ್ಕೆ ನೂರು ಹೆಜ್ಜೆ ಇಡಿ ಅಂತ ದೈವ ಹೇಳಿದೆ. ಧರ್ಮ ಪ್ರಕಾರ, ಆಚಾರ ವಿಚಾರದಲ್ಲಿ ಹೋಗಲು ದೈವ ಹೇಳಿದೆ’ ಎಂದಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *