Home / Breaking News / ತಂಬಾಕು,ಸಿಗರೇಟು,ಗುಟಕಾ,ಸೇವನೆಗೆ ಬ್ರೇಕ್ ಹಾಕಲು ಕೋಟ್ಪಾ ಕಾಯ್ದೆ

ತಂಬಾಕು,ಸಿಗರೇಟು,ಗುಟಕಾ,ಸೇವನೆಗೆ ಬ್ರೇಕ್ ಹಾಕಲು ಕೋಟ್ಪಾ ಕಾಯ್ದೆ

ಬೆಳಗಾವಿ,-: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಬೆಳಗಾವಿ ಇವರ ಸಹಯೋಗದಲ್ಲಿ “ಕಾನೂನು ಜಾರಿಗೂಳಿಸಲು ಪೊಲೀಸ್ ಅಧಿಕಾರಿಗಳಿಗೆ” ತಂಬಾಕು ಹಾಗೂ ತಂಬಾಕಿನಿಂದಾಗುವ ದುಷ್ಪರಿಣಾಮದ ಬಗ್ಗೆ ಬುಧವಾರ(ಡಿ.9) ಒಂದು ದಿನದ ತರಬೇತಿ ಕಾರ್ಯಾಗಾರ ಜಿಲ್ಲಾ ತರಬೇತಿ ಕೇಂದ್ರ ಬೆಳಗಾವಿಯಲ್ಲಿ ಜರುಗಿತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸಿಪಿಐ ಕುಬೇರ ರಾಯಮನಿ ಅವರು, “ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲವಾರು ರೀತಿಯ ದುಷ್ಪರಿಣಾಮ ಬಿರುತ್ತವೆ. ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಆಂಶಗಳಿರುತ್ತವೆ ಹೀಗಾಗಿ ಸಾರ್ವನಿಕರು ತಂಬಾಕು ಸೇವನೆ ತ್ಯಜಿಸಬೇಕು” ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ ಮತ್ತು ವಿಭಾಗೀಯ ಸಹ ನಿದೇಶಕರಾದ ಡಾ.ಎಸ್.ವಿ ಮುನ್ಯಾಳ ಮಾತನಾಡಿ, ಸಿಗರೇಟು ಸೇವನೆಯಿಂದ ನಮ್ಮ ಆರೋಗ್ಯ ಹಾಳಾಗುವುದಲ್ಲದೆ ಇನ್ನೊಬ್ಬರ ಆರೋಗ್ಯವು ಕೂಡಾ ಹಾಳಾಗುತ್ತದೆ. ಇದರಿಂದಾಗಿ ನಾವೆಲ್ಲರೂ ಪರೋಕ್ಷವಾಗಿ ತಂಬಾಕು ಸೇವನೆಗೆ ಒಳಗಾಗುತ್ತಿದ್ದೆವೆಂದು ತಿಳಿಸಿದರು

ಪ್ರಾಂಶುಪಾಲರು ಜಿಲ್ಲಾ ತರಬೇತಿ ಕೆಂದ್ರ ಬೆಳಗಾವಿ ಡಾ. ಸರೋಜಾ ತಿಗಡಿ ಅವರು ಬಾಯಿ ಕ್ಯಾನ್ಸರ ಕುರಿತು ಪಿಪಿಟಿ ಮೂಲಕ ಉಪನ್ಯಾಸ ನೀಡಿದರು.
ಯುವ ಜನಾಂಗದವರಿಗೆ ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಯುವ ಜನಾಂಗ ಈ ದುಷ್ಟಟಕ್ಕೆ ಒಳಗಾಗದಂತೆ ಎಚ್ಚರ ವಹಿಸಬೇಕೆಂದರು.
ಗರ್ಭಿಣಿ ಮಹಿಳೆಯರು ತಂಬಾಕು ಸೇವನೆ ಮಾಡುವುದರಿಂದ ಮಹಿಳೆಯರಲ್ಲಿ ನೀರ್ಜಿವ ಜನನ, ಆವಧಿ ಪೂರ್ಣ ಜನನ ಹಾಗೂ ಕಡಿಮೆ ತೂಕ ಇರುವ ಮಕ್ಕಳು ಮತ್ತು ಜನನವಾದರು ಅಂಗವಿಕಲತೆಯಾಗಿ ಹುಟ್ಟುವ ಮಕ್ಕಳ ಪ್ರಮಾಣ ಜಾಸ್ತಿಯಾಗಿರುತ್ತದೆ ಎಂದು ಡಾ.ಸರೋಜಾ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಡಾ. ಶ್ವೇತಾ ಪಾಟೀಲ, ತಂಬಾಕಿನ ಕಾನೂನು ಅರಿವು ಕೋಟ್ಪಾ-2003 ರ ಬಗ್ಗೆ ಸೆಕ್ಷನ್-4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮಾಡಲಾಗಿದೆ. ಈ ಕಾನೂನು ಉಲ್ಲಂಘಿಸಿದ ವ್ಯಕ್ಕಿಗೆ 200/-ದಂಡ ವಿಧಿಸಲಾಗುವುದು ಎಂದು ತಿಖಿಸಿದರು.

ಸೆಕ್ಷನ್-5 ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ನಿಷೇಧಿಸಲಾಗಿರುತ್ತದೆ. ಸೆಕ್ಷನ್-6ರ ಪ್ರಕಾರ ತಂಬಾಕು ಉತ್ಪನ್ನಗಳ ಅಪ್ರಾಪ್ತ ವಯಸ್ಕರಿಗೆ ನಿಯಂತ್ರಣ ಮಾಡುವುದು ಹಾಗೂ ಸೆಕ್ಷನ್-6(ಬಿ) ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಮೀಟರ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್-7 ಪ್ರಕಾರ ಸಿಗರೇಟ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ಧಿಷ್ಡ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಮೀಕ್ಷಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ: ಬಿ. ಎನ್ ತುಕ್ಕಾರ, ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲುವಾರು ರೀತಿಯ ದುಷ್ಪರಿಣಾಮ ಬಿರುತ್ತವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಆಂಶಗಳಿರುತ್ತವೆ ಹೀಗಾಗಿ ಸಾರ್ವನಿಕರು ತಂಬಾಕು ಸೇವನೆ ತ್ಯಜಿಸಬೇಕು ಎಂದು ಕರೆ ನೀಡಿದರು.

ಈ ತರಬೇತಿ ಕಾರ್ಯಾಗಾರದಲ್ಲಿ ಪೊಲೀಸ್ ಅಧಿಕಾರಿಗಳು ಹಾಜರಿದ್ದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತೆಯಾದ ಕುಮಾರಿ ಕವಿತಾ ರಾಜನ್ನವರ ಕಾರ್ಯಕ್ರಮವನ್ನು ನಿರೂಪಿಸಿದರು.
****

Check Also

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ …

Leave a Reply

Your email address will not be published. Required fields are marked *