ಇವರಿಬ್ಬರು ಸೇರಿ ಬರೊಬ್ಬರಿ ಇಪ್ಪತ್ತೆರಡು ಜನ ಆದ್ರು ನೋಡಿ…!!

ಕೆಪಿಟಿಸಿಎಲ್ ಅಕ್ರಮ ಪರೀಕ್ಷಾ ಪ್ರಕರಣ
ಮತ್ತಿಬ್ಬರ ಆರೋಪಿಗಳ ಬಂಧನ

ಬೆಳಗಾವಿ-
ಕೆಪಿಟಿಸಿಎಲ್ ಅಕ್ರಮ ಪರೀಕ್ಷಾ ಹರಗಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 22ಕ್ಕೇರಿದೆ.
ಗೋಕಾಕ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ ( 26) ಮತ್ತು ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ ( 27) ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.
ಯಲ್ಲಪ್ಪ ಮಹದೇವ ರಕ್ಷಿ ಇಲೆಕ್ಟ್ರಾನಿಕ್ ಡಿವೈಸ್ ವಿದ್ಯಾರ್ಥಗಳಿಗೆ ಕೊಟ್ಟವನು ಮತ್ತು ಶಿರಹಟ್ಟಿಯಲ್ಲಿ ಪ್ರಶ್ನೆ ಪತ್ರಿಕೆಗೆ ಉತ್ತರ ಹೇಳಿದವನು, ಇತನಿಂದ ಒಂದು ಮೊಬೈಲ್ ಮತ್ತು ಒಂದು ಕಾರ ಜಪ್ತಿ ಮಾಡಲಾಗಿದೆ.
ನಾಗಪ್ಪ ಶಿವಪ್ಪ ದೊಡಮನಿ ಇತನು ಇಲೆಕ್ಟ್ರಾನಿಕ್ ಡಿವೈಸ್ ತಗೆದುಕೊಂಡು ಹೋಗಿ ಪರಿಕ್ಷೆ ಬರೆದವನು. ಇತನಿಂದ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *