Breaking News
Home / Breaking News / ಲಖನ್ ಗೆ ಟಿಕೆಟ್ ನೀಡುವಂತೆ ಸಿಎಂ ಬಳಿ ನಗರ ಸೇವಕರ ನಿಯೋಗ

ಲಖನ್ ಗೆ ಟಿಕೆಟ್ ನೀಡುವಂತೆ ಸಿಎಂ ಬಳಿ ನಗರ ಸೇವಕರ ನಿಯೋಗ

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಕಾಂಗ್ರೆಸ ವಲಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ ಹದಿನೈದಕ್ಕೂ ಹೆಚ್ಚು ನಗರ ಸೇವಕರು ಶಾಸಕ ಸೇಠ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ

ವಿರೋಧ ಪಕ್ಷದ ನಾಯಕ ರವಿ ಧೋತ್ರೆ ಅವರ ನೇತ್ರತ್ವದಲ್ಲಿ ಹದಿನೈದಕ್ಕೂ ಹೆಚ್ಚು ನಗರ ಸೇವಕರು ಮೈಸೂರಿಗೆ ತೆರಳಿ ಮುಖ್ಯಮಂತ್ರಿ ಸಿದ್ಧರಾಮಯ್ಯ,ಗೃಹ ಸಚಿವ ಡಾ ಪರಮೇಶ್ವರ,ದಿನೇಶ ಗುಂಡೂರಾವ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಲಖನ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ

ಬೆಳಗಾವಿ ಪಾಲಿಕೆಯ ವಿರೋಧ ಪಕ್ಷದ ನಾಯಕ ರವಿ ಧೋತ್ರೆ,ರಮೇಶ ಸೊಂಟಕ್ಕಿ ಉಪ ಮಹಾಪೌರ ನಾಗೇಶ ಮಂಡೋಳ್ಕರ್ ಭೈರಗೌಡ ಪಾಟೀಲ,ದಿನೇಶ ನಾಶಿಪುಡಿ ಜಯಶ್ರೀ ಮಾಳಗಿ ಸೇರಿದಂತೆ ಹದಿನೈದಕ್ಕೂ ಹೆಚ್ಚು ನಗರ ಸೇವಕರು ಲಖನ್ ಜಾರಕಿಹೊಳಿ ಅವರಿಗೆ ಬೆಳಗಾವಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿಕೊಳ್ಳುವದರ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ

ಬೆಳಗಾವಿ ಸುದ್ಧಿ ಡಾಟ್ ಕಾಮ್ ಜೊತೆ ಮಾತನಾಡಿದ ವಿರೋಧ ಪಕ್ಷದ ನಾಯಕ ರವಿ ಧೋತ್ರೆ ಲಖನ್ ಜಾರಕಿಹೊಳಿ ಅವರಿಗೆ ಬೆಳಗಾವಿ ಉತ್ತರದಿಂದ ಟಿಕೇಟ್ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಅವರಿಗೆ ಬೆಂಬಲ ಸೂಚಿಸಿ ಇಪ್ಪತ್ತಕ್ಕೂ ಹೆಚ್ಚು ನಗರ ಸೇವಕರು ಮೈಸೂರಿಗೆ ಬಂದಿದ್ದಾರೆ ಲಖನ್ ಜಾರಕಿಹೊಳಿ ಅವರಿಗೆ ಟೆಕೆಟ್ ಸಿಗೋವರೆಗೂ ಹೋರಾಟ ಮುಂದುವರೆಯುತ್ತದೆ ಎಂದರು

ಒಟ್ಟಾರೆ ಬೆಳಗಾವಿ ಉತ್ತರದಲ್ಲಿ ಈಗಿನಿಂದಲೇ ಪ್ರಶ್ನಾತೀತ ಗಾಳಿ ಬಿಸುತ್ತಿದ್ದು ಲಖನ್ ಜಾರಕಿಹೊಳಿ ಬೆಳಗಾವಿ ಉತ್ತರ ಕ್ಷೇತ್ರಕ್ಕೆ ಲಗ್ಗೆ ಇಟ್ಡಿರುವ ವಿಷಯ ಖಾತ್ರಿಯಾದಂತಾಗಿದೆ

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *