ಲಕ್ಷ್ಮಣ ಸವದಿಗೆ ಮುಖ್ಯಮಂತ್ರಿ ಆಗ್ರಿ ಅಂತಾ ಆಶೀರ್ವಾದ ಮಾಡಿದವರು ಯಾರು ಗೊತ್ತಾ.??

ಬೆಳಗಾವಿ-ಲಕ್ಷ್ಮಣ ಸವದಿಗೆ ಸಿಎಂ ಆಗುವಂತೆ ಜೈನ ಮುನಿಗಳು ಆಶೀರ್ವಾದ ಮಾಡಿದ್ದಾರೆ.ಮಾಜಿ ಡಿಸಿಎಂ‌ ಲಕ್ಷ್ಮಣ ಸವದಿಗೆ ಜೈನ್ ಮುನಿಗಳಿಂದ ಆಶೀರ್ವಾದ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ತ್ ವೈರಲ್ ಆಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದ ಪಂಚಕಲ್ಯಾಣ ಮಹೋತ್ಸವದಲ್ಲಿ ಜೈನ ಮುನಿಗಳು ಆಶೀರ್ವಾದ ಮಾಡಿದ್ದಾರೆ.ಪೂಜ್ಯ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರಿಂದ ಲಕ್ಷ್ಮಣ ಸವದಿ ಆಶೀರ್ವಾದ ಪಡೆದಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಯಾರು ಸಿಎಂ ಆಗಿಲ್ಲ,ನೀವು ಮುಂದೆ ಸಿಎಂ ಆಗಿ ಎಂದು ಆಶೀರ್ವದಿಸಿದ ಜೈನ‌ ಮುನಿಗಳು,ಸಿಎಂ ಆಗುವಂತೆ ಆಶೀರ್ವಾದ ಮಾಡುತ್ತಿದ್ದಂತೆ ತಲೆಬಾಗಿ ನಮಸ್ಕರಿಸಿದ ಸವದಿ ಮುನಿಗಳ ಆಶೀರ್ವಾದ ಪಡೆದಿದ್ದಾರೆ.

Check Also

ಕುಂಭಮೇಳದಿಂದ ವಾಪಸ್ ಬರುವಾಗ ಬೆಳಗಾವಿಯ ನಾಲ್ವರ ಸಾವು

ಬೆಳಗಾವಿ- ಮಹಾ ಕುಂಭಮೇಳಕ್ಕೆ ಹೋಗಿ ವಾಪಾಸ್ ಆಗುವಾಗ ಟಿ.ಟಿ ವಾಹನ ಅಪಘಾತಕ್ಕೀಡಾಗಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.ಬೆಳಗಾವಿಯ ಶಹಾಪುರ …

Leave a Reply

Your email address will not be published. Required fields are marked *