Breaking News

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ದಸರಾ ದಂದು ಅಭಿವೃದ್ಧಿಯ ಹಬ್ಬ …..!!!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಯ ಝಲಕ್ ಆರಂಭವಾಗಿದೆ ದಸರಾ ದಿನದಂದು ಈ ಕ್ಷೇತ್ರದಲ್ಲಿ ಅಭಿವೃದ್ಧಿಯ ಹಬ್ಬ ಮನೆ ಮಾಡಿದೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಇಂದು ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಾವಿನಕಟ್ಟಿ ಹೊನ್ನಿಹಾಳ ಕೂಡು ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ದಸರಾ ಹಬ್ಬದ ಉತ್ಸಾಹವನ್ನು ಇಮ್ಮಡಿ ಗೊಳಿಸಿದರು

ಶಾಸಕರ ಅಭಿವೃದ್ಧಿಗೆ ಮೆಚ್ವಿ ಮಾವಿನಕಟ್ಟಿ ಮತ್ತು ಹೊನ್ನಿಹಾಳ ಗ್ರಾಮದ ಹಿರಿಯರು ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸತ್ಕರಿಸಿ ಗೌರವಿಸಿದರು

ಗ್ರಾಮದ ಹಿರಿಯರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಹಿರಿಯರ ಆಶಿರ್ವಾದದಿಂದ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಯ ಹಬ್ಬ ಆರಂಭವಾಗಿದೆ ಸರ್ಕಾರ ತಮ್ಮ ಬೇಡಿಕೆಗಳಿಗೆ ತ್ವರಿತಗತಿಯ ಸ್ಪಂದನೆ ನೀಡುತ್ತಿದೆ ಎಂದು ಹೆಬ್ಬಾಳಕರ ಸಮಾಧಾನ ವ್ಯೆಕ್ತ ಪಡಿಸಿದರು

ರಾಜ್ಯದ ರೈತರ ಸಾಲ ಮನ್ನಾ ಮಾಡಿರುವ ರಾಜ್ಯದ ಸಮ್ಮಿಶ್ರ ಸರ್ಕಾರ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ಕೊಡುತ್ತಿದೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂದು ಹೆಬ್ಬಾಳಕರ ಹೇಳಿದರು

ಕ್ರಾಂತಿಯ ನೆಲ ಕಿತ್ತೂರಿಗೆ ವಿಶೇಷ ಗೌರವ

ಬ್ರಿಟೀಷರ ವಿರುದ್ಧ ಸೆಡ್ಡು ಹೊಡೆದು ಸ್ವಾತಂತ್ರ್ಯ ಹೋರಾಟದ ಬೆಳ್ಳಿಚುಕ್ಕೆ ಎನಿಸಿ ಕೊಂಡಿರುವ ಕ್ರಾಂತಿ ನೆಲ ಕಿತ್ತೂರಿನ ಉತ್ಸವಕ್ಕೆ ರಾಜ್ಯ ಸರ್ಕಾರ 30 ಲಕ್ಷ ರೂ ಅನುದಾನ ಕೊಡುವದರ ಜೊತೆಗೆ ಹೆಚ್ವುವರಿಯಾಗಿ 50 ಲಕ್ಷ ರೂ ಅನುದಾನ ನೀಡುವ ಮೂಲಕ ರಾಜ್ಯ ಸರ್ಕಾರ ಕ್ರಾಂತಿಯ ನೆಲಕ್ಕೆ ವಿಶೇಷ ಗೌರವ ನೀಡಿದೆ ಎಂದು ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮೆಚ್ವುಗೆ ವ್ಯೆಕ್ತ ಪಡಿಸಿ ಮುಖ್ಯಮಂತ್ರಿಗಳಿಗೆ ಅಭಿನಂಧಿಸಿದ್ದಾರೆ

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.