ಸಚಿವ ಸಂಪುಟ ವಿಸ್ತರಣೆ ,ಲಕ್ಷ್ಮೀ ಹೆಬ್ನಾಳಕರ ಗೆ ದೆಹಲಿಗೆ ಬುಲಾವ್

ಬೆಳಗಾವಿ- ರಾಜ್ಯದಲ್ಲಿ ಸಚಿವ ಸಂಪುಟದ ವಿಸರಣೆ ಮಾಡುವ ಸುದ್ಧಿ ಖಾತ್ರಿಯಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ಲಾಭಿಯ ಜಾತ್ರೆ ನಡೆಯುತ್ತಿದೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ನಾಳೆ ದೆಹಲಿಗೆ ಬುಲಾವ್ ಬಂದಿದ್ದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೂ ಬುಲಾವ್ ಬಂದಿದ್ದು ವಿಶೇಷವಾಗಿದೆ

ಸಚಿವ ರಮೇಶ ಜಾರಕಿಹೊಳಿ ಅವರ ಬದಲಾಗಿ ಸತೀಶ್ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ಸಿಗುವ ಸುದ್ಧಿ ಈಗ ಜಿಲ್ಲೆಯಾದ್ಯಂತ ದಟ್ಟವಾಗಿ ಹರಡಿದೆ

ಜಯಮಾಲಾ ಬದಲಾಗಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಹೇಳಲಾಗಿದ್ದು ಸಚಿವ ಸಂಪುಟ ವಿಸ್ತರಣೆಯಲ್ಲಿ ಅದಲ್ ಬದಲ್ ಕೈಂಚಿ ಕದಲ್ ಆಗುವದು ಗ್ಯಾರಂಟಿ

ಲಕ್ಷ್ಮಿ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ದೆಹಲಿಗೆ ಬುಲಾವ್ ಮಾಡಿರುವ ವಿಷಯ ಈಗ ಚರ್ವೆಗೆ ಗ್ರಾಸವಾಗಿದೆ ಮಂತ್ರಿ ಸ್ಥಾನದ ಆಕಾಂಕ್ಷಿಗಳು ಸಂಪನ್ಮೂಲ ಕ್ರೋಡೀಕರಿಸಿ ಬ್ಯಾಗ್ ತುಂಬಿಕೊಂಡು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ

Check Also

ಕುಂಭಮೇಳದಿಂದ ವಾಪಸ್ ಬರುವಾಗ ಬೆಳಗಾವಿಯ ನಾಲ್ವರ ಸಾವು

ಬೆಳಗಾವಿ- ಮಹಾ ಕುಂಭಮೇಳಕ್ಕೆ ಹೋಗಿ ವಾಪಾಸ್ ಆಗುವಾಗ ಟಿ.ಟಿ ವಾಹನ ಅಪಘಾತಕ್ಕೀಡಾಗಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.ಬೆಳಗಾವಿಯ ಶಹಾಪುರ …

Leave a Reply

Your email address will not be published. Required fields are marked *