ಅಸಮಾಧಾನ ನಮ್ಮ ವ್ಯೆಯಕ್ತಿಕ ವಿಚಾರ, ಪಕ್ಷ ಬಂದಾಗ ನಾವೆಲ್ಲರೂ ಒಂದೇ- ಹೆಬ್ಬಾಳಕರ

ಬೆಳಗಾವಿ-
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರ ಸ್ಟಾರ್ ಕ್ಯಾಂಪೇನ್ ಕೊರೆತೆ ಇಲ್ಲ ಎಂದು ಬೆಳಗಾವಿಯಲ್ಲಿ ಶಾಸಕಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ

ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ದಲ್ಲಿ ಮಹಾ ಮಾನವತಾವಾದಿ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ಸಮರ್ಪಿಸಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಅಸಮಾಧಾನ ನಮ್ಮ ವಯಕ್ತಿಕ ವಿಚಾರ. ಪಕ್ಷ ಬಂದಾಗ ನಾವೇಲ್ಲರು ಒಂದಾಗುತ್ತೆವೆ. ಚುನಾವಣಾ ಬಿರುಸಿನ ಪ್ರಚಾರ ನಡೆಸಿದ್ದೆವೆ.

ಯಾರ ಯಾರ ಕ್ಷೇತ್ರದಲ್ಲಿ ಏನಾಗುತ್ತಿದೆ ನನಗೆ ಗೊತ್ತಿಲ್ಲ, ಆದರೆ ನನ್ನ ಕ್ಷೇತ್ರದಲ್ಲಿ ಹೆಚ್ಚು ಮತಗಳಿಸುವ ಗುರಿ ಹೊಂದಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು

ಕ್ಷೇತ್ರದಲ್ಲಿ ಸ್ಟಾರ್ ಕ್ಯಾಂಪೇನ್ ಕೊರತೆ ಇಲ್ಲಾ, ಸಾಧೂನವರ್ ಗೆ ನಾವು ಎಲ್ಲರು ಸೇರಿ ಟಿಕೆಟ್ ಕೊಡಿಸಿದ್ದೇವೆ. ಹೀಗಾಗಿ ಎಲ್ಲರೂ ಸೇರಿ ಚುನಾವಣೆ ಎದುರಿಸುತ್ತೇವೆ ಮನೆ ಗೆದ್ದು ಮಾರು ಗೆಲ್ಲಿ ಅಂತಾ ಹೇಳಿದ್ದಾರೆ, ಆರೀತಿ ಎಲ್ಲರೂ ಸೇರಿ ಕೆಲಸ ಮಾಡಿದುತ್ತೆವೆ ಎಂದರು

ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ನೇತೃತ್ವದಲ್ಲಿ ಚುನಾವಣಾ ನಡೆಯುತ್ತಿದೆ ಚಿಕ್ಕೋಡಿ ಮತ್ತು ಬೆಳಗಾವಿ ಎರಡು ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಎಂದು ಹೆಬ್ಬಾಳಕರ ಹೇಳಿದರು

ಗೋಕಾಕ ಕ್ಷೇತ್ರದಲ್ಲಿ
ಲಖನ್ ಜಾರಕಿಹೊಳಿಗೆ ನೇತೃತ್ವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಲಖನ್ ಜಾರಕಿಹೊಳಿ ಅವರು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ ಈಗಲೂ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ
ಕಳೆದ ಬಾರಿ ಗೋಕಾಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಮತಗಳು ಬಂದಿದ್ದವು, ಈಬಾರಿಯೂ ಉತ್ತಮ ಮತ ಬರ್ತಾವೆ ಎಂದು ಹೆಬ್ಬಾಳಕರ ವಿಶ್ವಾಸ ವ್ಯೆಕ್ತಪಡಿಸಿದರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *