Breaking News

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಯ ವೇಗಕ್ಕೆ ಬ್ರೇಕ್ ಇಲ್ಲ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ದುರ್ಗಾದೇವಿ ಭವನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಸಂಜೆ ಉದ್ಘಾಟಿಸಿದರು.

ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಎಂದಿಗೂ ನಿಲ್ಲುವುದಿಲ್ಲ. ವಾರದಲ್ಲಿ 3 ದಿನ ಕ್ಷೇತ್ರದಲ್ಲಿರಲು ನಾನು ಪ್ರಯತ್ನಿಸುತ್ತಿದ್ದೇನೆ. ನಾನು ರಾಜ್ಯದ ಯಾವುದೇ ಭಾಗದಲ್ಲಿರಲಿ, ಇಲ್ಲಿನ ಕೆಲಸಗಳು ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು. ನನ್ನ ಮಗ ಮೃಣಾಲ ಹೆಬ್ಬಾಳಕರ್, ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ತಂಡ ಗ್ರಾಮೀಣ ಕ್ಷೇತ್ರದಲ್ಲಿನ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಹೆಬ್ಬಾಳಕರ್ ತಿಳಿಸಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ತಿಪ್ಪಣ್ಣ ದಂಡಗಲ್ಕರ್, ಯುವರಾಜ ಕದಂ, ಮಲ್ಲೇಶ್ ಚೌಗುಲೆ, ದಿನೇಶ್ ಲೋಹಾರ್, ಲಲಿತಾ ದಂಡಗಲ್ಕರ್, ರಂಜನಾ ನಾಯ್ಕ್, ನಿಖಿತಾ ದಂಡಗಲ್ಕರ್, ಮಂಜುಶಾ ನಾಯಕ್, ಸಾಗರ್ ಲಾಖೆ, ಉಮೇಶ್ ಚೋಪಡೆ, ಅಶ್ವಿನಿ ಲೋಹಾರ್, ಬಾಳಕೃಷ್ಣ ಚೋಪಡೆ ಹಾಗೂ ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.