Breaking News
Home / Breaking News / ವಿಕಲಚೇತನರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ವಿಕಲಚೇತನರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಬೆಳಗಾವಿ- ನಿನ್ನೆಯ ದಿನ ಮಂಗಳವಾರ ಸಂಜೆಬೆಳಗಾವಿಯ ಜಿಲ್ಲಾಧಿಕಾರಿಗಳ ಆವರಣದಲ್ಲಿ ವಿಕಲಚೇತನರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದರು.

ಧರಣಿ ಕುಳಿತಿದ್ದ ನವ ಕರ್ನಾಟಕ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿ ಮಾಡಿ, ಅವರ ಬೇಡಿಕೆಗಳ ಮಾಹಿತಿಯನ್ನು ಪಡೆದು,ವಿಕಲಚೇತನರ ಅಹಾಲು ಸ್ವೀಕಾರ ಮಾಡಿದ್ರು.

ರಾಜ್ಯದ 6860 ಜನ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರ ಹುದ್ದೆಗಳನ್ನು ಖಾಯಂಗೊಳಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಪತ್ರವನ್ನು ಸ್ವೀಕರಿಸಿದ ಸಚಿವರು ನಾಳೆ ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಜತೆ ಮನವಿ ಪತ್ರದಲ್ಲಿರುವ ವಿಷಯದ ಕುರಿತು ಪ್ರಸ್ತಾಪಿಸುವುದಾಗಿ ಭರವಸೆ ನೀಡಿದ್ರು.

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *