Breaking News

ಬೆಳಗಾವಿಯಲ್ಲಿ ಹೆಬ್ಬಾಳಕರ ಶವಯಾತ್ರೆ

 

ಬೆಳಗಾವಿ- ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರ ನಾಡ ವಿರೋಧಿ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಹೆಬ್ಬಾಳಕರ ಅವರ ಪ್ರತಿಕೃತಿಯ ಶವ ಯಾತ್ರೆ ನಡೆಸಿ ಆಕ್ರೋಶ ವ್ಯೆಕ್ತಪಡಿಸಿದರು

ನಗರದ ಚನ್ನಮ್ಮ ವೃತ್ತದಲ್ಲಿ ಶವಯಾತ್ರೆ ನಡೆಸಿ ರಾಮ ನಾಮ ಸತ್ಯ ಹೈ ಎಂದು ಮಂತ್ರ ಜಪಿಸಿ ಬಾಯಿ ಬಡಿದಿಕೊಂಡು ಪ್ರತಿಕೃತಿಯನ್ನು ಧಹಿಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು

ಕೈಯಲ್ಲಿ ಲಕ್ಷ್ಮೀ ಹೆಬ್ಬಾಳಕರ ಅವರ ಭಾವಚಿತ್ರ ಹಿಡಿದು ಅದರ ಮೇಲೆ ಮತ್ತೆ ಹುಟ್ಟಿ ಬರಬೇಡಿ ಎಂದು ಬರೆದು ಕರವೇ ಕಾರ್ಯಕರ್ತರು ಪ್ರತಿಭಟಿಸಿದರು
ಈ ಸಂಧರ್ಭದಲ್ಲಿ ಮಾತನಾಡಿದ ಮಹಾಂತೇಶ ರಣಗಟ್ಟಿಮಠ ನಾಡವಿರೋಧಿಗಳನ್ನು ಕರವೇ ಸಹಿಸುವದಿಲ್ಲ ಕಾಂಗ್ರೆಸ್ ಪಕ್ಷ ಕೂಡಲೇ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಉಚ್ಛಾಟಿಸಬೇಕು ಎಂದು ಒತ್ತಾಯ ಮಾಡಿದರು

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *