Breaking News

ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ನೀಡಿದ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-    ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಇಂದು ಚಂದನಹೊಸೂರ ಗ್ರಾಮಕ್ಕೆ ಭೇಟಿ ನೀಡಿ ಸಾಲದ ಭಾಧೆಯನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಸಿದ್ಧಪ್ಪಾ ಪರಪ್ಪಾ ಬಸರಿಕಟ್ಟಿ ರೈತನ ಕುಟುಂಬದÀ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಸರ್ಕಾರದಿಂದ ಎಲ್ಲ ರೀತಿಯ ಪರಿಹಾರವನ್ನು ದೊರಕಿಸಿ ಕೊಡುವುದಾಗಿ ಹೆಬ್ಬಾಳಕರ ಭರವಸೆ ನೀಡಿದರು.
ಸಾಲದ ಭಾಧೆಯನ್ನು ತಾಳಲಾರದೆ ಚಂದನಹೊಸೂರ ಗ್ರಾಮದ 52 ವಯಸ್ಸಿನ ರೈತ ಸಿದ್ಧಪ್ಪಾ ಪರಪ್ಪಾ ಬಸರಿಕಟ್ಟಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಎಲ್ಲ ಅಧಿಕಾರಿಗಳೊಂದಿಗೆ ಅವರ ಮನೆಗೆ ತೆರಳಿ ಮೃತ ರೈತನ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಲಕ್ಷ್ಮೀತಾಯಿ ಫೌಂಡೇಷನ ವತಿಯಿಂದ ತಾತ್ಕಾಲಿಕವಾಗಿ ಪರಿಹಾರವನ್ನು ನೀಡಿದರು.
ಈ ಸಂದರ್ಭದಲ್ಲಿ ಇನ್ ಬೆಳಗಾವಿಯ ಜೊತೆಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ರೈತರು ಆತ್ಮಸ್ಥೈರ್ಯವನ್ನು ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬಾರದು. ಸರ್ಕಾರ ರೈತರ ಜೊತೆಗಿದೆ. ರೈತರು ಯಾವುದೇ ರೀತಿಯ ಸಂಕಷ್ಟ ಏದುರಾದರೆ ತಮ್ಮ ಗಮನಕ್ಕೆ ತರಬೇಕು. ನಾನು ಸರ್ಕಾರದ ಗಮನಕ್ಕೆ ತರುತ್ತೇನೆ. ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯ ದಾರಿ ಹಿಡಿಯಬಾರದು. ದುಡ್ಡು ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ. ರೈತರು ಧೈರ್ಯದಿಂದ ಸಮಸ್ಯೆಗಳನ್ನು ಎದುರಿಸಬೇಕು. ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ ಎಂದು ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದ ರೈತರಲ್ಲಿ ಮನವಿ ಮಾಡಿಕೊಂಡರು.
ಮೃತ ರೈತನ ಕುಟುಂಬಕ್ಕೆ ಸಾಂತ್ವಾನ ಹೇಳಿದ ಬಳಿಕ ಉಪವಿಭಾಗಾಧಿಕಾರಿ ಕವಿತಾ ಯೋಗಪ್ಪನವರ, ತಹಶೀಲ್ದಾರ ಜಕ್ಕನಗೌಡರ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಗಳ ಜೊತೆಗೆ ಸಮಾಲೋಚನೆ ಮಾಡಿದ ಲಕ್ಷ್ಮೀ ಹೆಬ್ಬಾಳಕರ ಮೃತ ರೈತನ ಕುಟುಂಬಕ್ಕೆ ಕೂಡಲೇ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲ ರೀತಿಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕೂಡಲೇ ಮೃತ ರೈತನ ಕುಟುಂಬಕ್ಕೆ ಪರಿಹಾರ ಜೊತೆಗೆ ಮೃತ ರೈತನ ಪತ್ನಿಗೆ ಪ್ರತಿ ತಿಂಗಳು ಮಾಸಾಶನ ದೊರಕಿಸಿ ಕೊಡಬೇಕು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಪ ತಹಶೀಲ್ದಾರ ಅಶೋಕ ಮಣ್ಣಿಕೇರಿ, ಕಂದಾಯ ನಿರೀಕ್ಷಕ ಶ್ರೀಕಾಂತ ಹೈದರ, ಗ್ರಾಮ ಲೆಕ್ಕಾಧಿಕಾರಿ ಕಿರಣ ತೊರಗಲ್ ಹಾಗೂ ಚಂದನಹೋಸೂರ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.