ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯಕ್ಷವಾದ ನಾಲ್ಕನೆಯ ಚಿರತೆ…!!

ಬೆಳಗಾವಿ- ಬೆಳಗಾವಿ ಮಹಾನಗ,ಮೂಡಲಗಿ ತಾಲ್ಲೂಕು, ಚಿಕ್ಕೋಡಿಯ ಯಡೂರಿನಲ್ಲಿ ಚಿರತೆ ಕಾಣಿಸಿಕೊಂಡಿರುವ ಬೆನ್ನಲ್ಲಿಯೇ ಈಗ ಅಥಣಿ ತಾಲ್ಲೂಕಿನಲ್ಲೂ ಚಿರತೆ ಪ್ರತ್ಯಕ್ಷವಾಗಿದೆ.

ಚಿರತೆಯ ಹೆಜ್ಜೆ ಗುರುತಿನ ಚಿತ್ರ…

ಅಥಣಿ ತಾಲ್ಲೂಕಿನ ಶಿರಗುಪ್ಪಿ ಸಮೀಪದ, ಮೊಳವಾಡ ಗ್ರಾಮದ ಹದ್ದಿಯಲ್ಲಿ,ಪ್ರಶಾಂತ ಪಾಟೀಲ ಎಂಬ ರೈತರಿಗೆ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು,ಇಲ್ಲಿ ಚಿರತೆ ಓಡಾಡಿದ ಬಗ್ಗೆ ಚಿರತೆಯ ಹೆಜ್ಜೆ ಗುರುತುಗಳು ಕಾಣಿಸಿಕೊಂಡಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದಲ್ಲಿ ಚಿರತೆ ಕಂಡಿರುವ ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿ ಡಂಗುರ ಸಾರಿ ,ಗ್ರಾಮದ ಹದ್ದಿಯಲ್ಲಿ ಚಿರತೆ ಬಂದಿದೆ,ಹೊಲಕ್ಕೆ ಹೋಗುವವರು ಎಚ್ಚರಿಕೆ ವಹಿಸುವಂತೆ ಗ್ರಾಮದಲ್ಲಿ ಜಾಗೃತಿ ವಹಿಸಲಾಗಿದೆ.

ಸರಣಿಯಂತೆ ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ನಾಲ್ಕು ಚಿರತೆಗಳ ಜನತಾ ದರ್ಶನವಾಗಿದೆ,ಆದ್ರೆ ಇನ್ನುವರೆಗೆ ಒಂದು ಚಿರತೆಯೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿಲ್ಲ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *