Breaking News
Home / Breaking News / ಚನ್ನಮ್ಮ ವಿವಿ ಘಟನೆ ,ಮಾರುತಿ ಅಷ್ಟಗಿ ಪ್ರತಿಭಟನೆ

ಚನ್ನಮ್ಮ ವಿವಿ ಘಟನೆ ,ಮಾರುತಿ ಅಷ್ಟಗಿ ಪ್ರತಿಭಟನೆ

ಬೆಳಗಾವಿ

ಇತ್ತೀಚೆಗೆ ರಾಣಿಚನ್ನಮ್ಮ‌ ವಿಶ್ವ ವಿದ್ಯಾಲಯದ ಕುಲಪತಿ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕಾಕತಿ ಜಿಪಂ ಸದಸ್ಯ ಸಿದ್ದು ಸುಣಗಾರ, ರಾಮಾಗುಳಿನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡ ಮಾರುತಿ ಅಷ್ಟಗಿ ನೇತೃತ್ವದಲ್ಲಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿ ಶಿವಾನಂದ ಹೊಸಮನಿ, ಇಲ್ಲಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಮೇಲೆ ಉದ್ದೇಶ ಪೂರ್ವಕವಾಗಿ ಜಿಪಂ ಸದಸ್ಯ ಸಿದ್ದು ಸುಣಗಾರ ಹಾಗೂ ರಾಮಾಗುಳಿ ಸೇರಿದಂತೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.ಇದರಿಂದ ಪಾಲಕರು ತಮ್ಮ ವಿದ್ಯಾರ್ಥಿಗಳನ್ನು ವಿವಿಗೆ ಕಳುಹಿಸಲು ಭಯ ಪಡುತ್ತಿದ್ದಾರೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ದೂರು ದಾಖಲಿಸಿಕೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ನೂರಾರು ಯಮಕನಮರಡಿ ಕ್ಷೇತ್ರದ ಗ್ರಾಮಸ್ಥರು ಹಾಜರಿದ್ದರು.

Check Also

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …

Leave a Reply

Your email address will not be published. Required fields are marked *