Breaking News

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮುಂದಿನ ವಾರದಲ್ಲಿ ಅಂತಿಮ ತೀರ್ಮಾಣ

ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ.ಏಳೆಂಟು ಜನ ಆಕಾಂಕ್ಷಿಗಳಾಗಿದ್ದಾರೆ,ಎಲ್ಲ ಸಮುದಾಯದ ನಾಯಕರಿಂದಲೂ ಅರ್ಜಿಗಳು ಬಂದಿವೆ,ಮತ್ತೊಮ್ಮೆ ಪರಾಮರ್ಶೆ ಮಾಡುತ್ತೇವೆ ಎಂದು ಎಂಬಿ ಪಾಟೀಲ ಹೇಳಿದ್ರು

ಮುಂದಿನ ದಿನಗಳಲ್ಲಿ ಬೆಳಗಾವಿ ಲೋಕಸಭಾ ಮತ ಕ್ಷೇತ್ರದ ಎಲ್ಲ ವಿಧಾನಸಭಾ ಮತಕ್ಷೇತ್ರಗಳಿಗೂ ಹೋಗಿ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿದ ಬಳಿಕ ಅಂತಿಮವಾಗಿ ಆಕಾಂಕ್ಷಿಗಳ ಹೆಸರನ್ನು ಕೆಪಿಸಿಸಿಗೆ ಶಿಫಾರಸ್ಸು ಮಾಡುತ್ತೇವೆ ಎಂದರು.

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *