Breaking News

ಮಕ್ಕಳನ್ನು ಚುನಾವಣೆ ಪ್ರಚಾರಕ್ಕೆ ಬಳಸಿದ ಎಂಇಎಸ್ ಬೆಂಬಲಿತ ಅಭ್ಯರ್ಥಿ

ಬೆಳಗಾವಿ- ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಮಹಾರಾಷ್ಟ್ರ ಏಕೀಕರಣ  ಸಮಿತಿ ಅಸ್ತಿತ್ವ ಕಳೆದುಕೊಂಡಿದೆ. ಲೋಕಸಭೆ ಉಪಚುನಾವಣೆ ಮೂಲಕ ಮತ್ತೆ ಬೆಳಗಾವಿಯಲ್ಲಿ ಎಂಇಎಸ್ ಪ್ರಭಾವ ಜಾಸ್ತಿ ಮಾಡಿಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಬೆಳಗಾವಿ ಲೋಕಸಭಾ ಉಪಚುನಾವಣೆಗೆ

ಎಂಇಎಸ್ ಅಭ್ಯರ್ಥಿ ಶುಭಂ ಶಿಳಕೆ ನಿಲ್ಲಿಸಲಾಗಿದೆ. ಶುಭಂ ಪರ ಪ್ರಚಾರಕ್ಕಾಗಿ ಚಿಕ್ಕ ಮಕ್ಕಳನ್ನು ಬಳಸುತ್ತಿದೆ. ಮಕ್ಕಳು ಸೈಕಲ್ ಮೇಲೆ ಬಾವುಟ ಹಿಡಿದು ಪ್ರಚಾರ ನಡೆಸುತ್ತಿದ್ದಾರೆ.

ಎಂಇಎಸ್ ಅಂದ್ರೆ ಹಿಂದೂಸ್ತಾನ್ ಪಾರ್ಟಿ ಎಂದು ಮಕ್ಕಳ ತೆಲೆ ತುಂಬಿ ಎಂಇಎಸ್ ಅಭ್ಯರ್ಥಿ ಮಕ್ಕಳಿಂದ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಇದು ಚುನಾವಣೆ ಅಧಿಕಾರಿಗಳು ಗಮನಕ್ಕೆ ಬಂದಿಲ್ಲ. ಬೆಳಗಾವಿ ಎಲ್ಲಾ ಚುನಾವಣೆಗಳಲ್ಲಿ ಎಂಇಎಸ್ ಸೋತು ಸುಣ್ಣವಾಗಿದೆ. ಈ ಸಲ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇರೋ ಶಿವಸೇನೆ ಬೆಂಬಲದೊಂದಿಗೆ ಚುನಾವಣೆಗೆ ಸ್ಪರ್ಧೆ ಮಾಡಿದೆ..

Check Also

ವ್ಯಾಪಕ‌ ಮಳೆ: ಜು.27 ರಂದು ಶಾಲಾ-ಕಾಲೇಜು‌ ರಜೆ

ಬೆಳಗಾವಿ, ಜು.26(ಕರ್ನಾಟಕ ವಾರ್ತೆ): ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ(ಜುಲೈ 27) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ …

Leave a Reply

Your email address will not be published. Required fields are marked *