Breaking News
Home / Breaking News / ಮಂತ್ರಿಸ್ಥಾನದ ಆಕಾಂಕ್ಷಿಗಳು ಬೆಂಗಳೂರಿಗೆ….ಆಪತ್ಭಾಂಧವ ಜನರ ಬಳಿಗೆ….!!!

ಮಂತ್ರಿಸ್ಥಾನದ ಆಕಾಂಕ್ಷಿಗಳು ಬೆಂಗಳೂರಿಗೆ….ಆಪತ್ಭಾಂಧವ ಜನರ ಬಳಿಗೆ….!!!

ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದೆ.ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ.ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಆದರೆ ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.

ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ ಮಾಡಿ,ಮಳೆಯಿಂದ ಆಗಿರುವ ಅನಾಹುತಗಳನ್ನು,ಸಮಸ್ಯೆಗಳನ್ನು ಖುದ್ದಾಗಿ ಪರಶೀಲಿಸಿ,ಜನರ ಸಮಸ್ಯೆಗಳನ್ನು ಆಲಿಸಿ,ಸಮಸ್ಯೆ ಗಳನ್ನು ಸ್ಥಳದಲ್ಲೇ ಬಗೆಹರಿಸುತ್ತಿರುವ ಶಾಸಕ ಅಭಯ ಪಾಟೀಲ ನಿಜವಾಗಿಯೂ ಬೆಳಗಾವಿ ದಕ್ಷಿಣ ಕ್ಷೇತ್ರದ ಆಪತ್ಬಾಂಧವ,ಎಂದು ತೋರಿಸಿದ್ದಾರೆ.

ಕಳೆದ ಒಂದು ವಾರದಿಂದ ಬೆಳಗಾವಿ ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ವಿಪರೀತ ಮಳೆಯಿಂದಾಗಿ ,ನೀರು ಮನೆಗಳಿಗೆ ನುಗ್ಗುತ್ತಿದೆ.ನಾಲೆಗಳು ಉಕ್ಕಿ ಹರಿದು ನೀರು ಹೊಲಗದ್ದೆಗಳಿಗೆ ನುಗ್ಗುತ್ತಿದೆ.ಚರಂಡಿಗಳು ತುಂಬಿ ಹರಿದು,ಕೆಲವು ರಸ್ತೆಗಳು ಜಲಾವೃತಗೊಂಡಿದ್ದು,ಶಾಸಕ ಅಭಯ ಪಾಟೀಲ ಮಹಾನಗರ ಪಾಲಿಕೆಯ ಸಿಬ್ಬಂಧಿಗಳನ್ನು ಕರೆಯಿಸಿ,ಸಮಸ್ಯೆಯನ್ನು ಖುದ್ದಾಗಿ ಪರಶೀಲಿಸಿ ಸುರಿಯುತ್ತಿರುವ ಮಳೆಯಲ್ಲಿ ಛತ್ರಿ ಹಿಡಿದುಕೊಂಡು ಸ್ಥಳೀಯ ಜನರ ಜೊತೆ ಬೆರೆತು ದಕ್ಷಿಣ ಮತಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕ ಅಭಯ ಪಾಟೀಲ ಶ್ರಮಿಸುತ್ತಿದ್ದಾರೆ.

ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಮಂತ್ರಿಯಾಗಲು ಲಾಭಿ ಮಾಡಲು ಬಹಳಷ್ಟು ಜನ ಶಾಸಕರು ಬೆಂಗಳೂರು,ದೆಹಲಿಗೆ ದೌಡಾಯಿಸಿದ್ದಾರೆ.ಆದ್ರೆ ಶಾಸಕ ಅಭಯ ಪಾಟೀಲ ಮಾತ್ರ ಕ್ಷೇತ್ರದಲ್ಲಿ ಠಿಖಾಣಿ ಹೂಡಿ,ಬೆಳಗಿನ ಜಾವದಿಂದಲೇ ಜನಸೇವಕರಾಗಿ ಜನರ ಜೊತೆಗಿದ್ದಾರೆ.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *