Breaking News
Home / Breaking News / Belagavi ದೆಹಲಿಯಲ್ಲಿ , ಬೆಳಗಾವಿಯ ಪರವಾಗಿ ಸಿಎಂ ಬೊಮ್ಮಾಯಿ ಭರ್ಜರಿ ಬ್ಯಾಟೀಂಗ್…

Belagavi ದೆಹಲಿಯಲ್ಲಿ , ಬೆಳಗಾವಿಯ ಪರವಾಗಿ ಸಿಎಂ ಬೊಮ್ಮಾಯಿ ಭರ್ಜರಿ ಬ್ಯಾಟೀಂಗ್…

ಬೆಳಗಾವಿ ಮಹಾನಗರದಲ್ಲಿ ಕೆ.ಎಲ್ ಇ ಆಸ್ಪತ್ರೆಯ ಮುಂದಿನ ಭಾಗದಲ್ಲಿ ನ್ಯಾಶನಲ್ ಹೈವೇ ಪಕ್ಕದಲ್ಲಿಯೇ ಕರ್ನಾಟಕ ಸರ್ಕಾರದ 750 ಕ್ಕೂ ಹೆಚ್ವು ಎಕರೆ ಜನೀನು ರಕ್ಷಣಾ ಇಲಾಖೆಯ ಆಧೀನದಲ್ಲಿ ಇದೆ,ಈ ಜಮೀನು ರಕ್ಷಣಾ ಕರ್ನಾಟಕ ಸರ್ಕಾರಕ್ಕೆ ವಾಪಸ್ ಕೊಡಬೇಕು ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದು ಶಾಸಕ ಅಭಯ ಪಾಟೀಲ ಅವರ ಹೋರಾಟಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತ್ವರಿತವಾಗಿ ಸ್ಪಂದಿಸಿದ್ದು, ಈ ವಿಚಾರವಾಗಿ ಸಿಎಂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಬೆಳಗಾವಿಯಲ್ಲಿರುವ ಜಮೀನು ತ್ವರಿತವಾಗಿ ಹಸ್ತಾಂತರ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ‌‌.ರಕ್ಷಣಾ ಇಲಾಖೆಯ ಆಧೀನದಲ್ಲಿರುವ ಈ ಜಮೀನು ಸರ್ಕಾರಕ್ಕೆ ಹಸ್ತಾಂತರವಾದಲ್ಲಿ,ಈ ಜಮೀನಿನಲ್ಲಿ ಬೃಹತ್ ಐಟಿ,ಬಿಟಿ,ಪಾರ್ಕ್ ನಿರ್ಮಾಣ ಮಾಡುವದು ಶಾಸಕ ಅಭಯ ಪಾಟೀಲರ ಸಂಕಲ್ಪವಾಗಿದೆ.

ನವದೆಹಲಿ, ಮೇ 11: ಬೆಳಗಾವಿಯಲ್ಲಿ 750 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದೆ. ಅದು ರಾಜ್ಯ ಸರ್ಕಾರದ ಜಮೀನು. ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ತಿಳಿಸಿದ್ದಾರೆ.
ಅವರು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಲಾಯಿತು ಎಂದರು.

ಬೆಳಗಾವಿಯಲ್ಲಿ ಐ.ಟಿ ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗಿದೆ. ಅದಕ್ಕಾಗಿ ಈ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಂಗ್ ಅವರು, ಸಂಬಂಧಪಟ್ಟವರ ಜತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.

Check Also

ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಕುಮಟಾ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥ …

Leave a Reply

Your email address will not be published. Required fields are marked *