Breaking News

ಬೆಳಗಾವಿ ಜಿಲ್ಲೆಯಲ್ಲಿ ಅಲ್ಲೊಂದು,ಇಲ್ಲೊಂದು ಎರಡು ಮರ್ಡರ್

ಬೆಳಗಾವಿ ಜಿಲ್ಲೆಯ ಅಥಣಿ ಮತ್ತು ಮುರುಗೋಡ ಠಾಣಾ ವ್ಯಾಪ್ತಿಯಲ್ಲಿ ಎರಡು ಮರ್ಡರ್ ಕೇಸ್ ದಾಖಲಾಗಿವೆ.

ಅಥಣಿ : ಕೊಲೆ ಮಾಡಿ ಬಸ್ ನಿಲ್ದಾಣದಲ್ಲಿ ಶವ ಎಸೆದು ದುಷ್ಕೃತ್ಯವೆಸಗಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.

ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದ ಚೆನ್ನಮ್ಮ ಸರ್ಕಲ್ ನಲ್ಲಿರುವ ಬಸ್ ನಿಲ್ದಾಣದಲ್ಲಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ನೆರೆಯ ಮದಭಾವಿ ಗ್ರಾಮದ ಅಪ್ಪಸಾಬ ಸಿದ್ದಪ್ಪ ಕಾಂಬಳೆ(37) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಮೃತ ಅಪ್ಪಸಾಬ ನಿನ್ನೆ ಮಹಾರಾಷ್ಟ್ರಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದು ರಾತ್ರಿ 9:00 ಗಂಟೆ ಸುಮಾರಿಗೆ ಮಡದಿಗೆ ಫೋನ್ ಕರೆ ಮಾಡಿ ಮಶೀನ್ ರಿಪೇರಿ ಇದೆ ಇವತ್ತು ಊರಿಗೆ ಬರಲು ಆಗುವುದಿಲ್ಲ ಎಂದು ತಿಳಿಸಿದ್ದಾನೆ.

ಬೆಳಗಾಗುತ್ತಲೇ ಗಂಡ ಅಪಾಸಾಬ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *