ಬೆಳಗಾವಿಯಲ್ಲಿ, SSLC ವಿಧ್ಯಾರ್ಥಿಯ ಕೊಲೆ….!!

ಬೆಳಗಾವಿ-ನಾಪತ್ತೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಬರ್ಬರವಾಗಿ ಹತ್ಯೆ ಮಾಡಿದ ಘಟನೆಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ.ಬೆನ್ನಿಗೆ ಮಾರಕಾಸ್ತ್ರದಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ.
ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ದಾಖಲಾಗಿತ್ತು,ನಿನ್ನೆ ರಾತ್ರಿ ವಿದ್ಯಾರ್ಥಿಯನ್ನ ಕೊಲೆ ಮಾಡಿ ಎಸೆದಿರುವ ಹಂತಕರು ಪರಾರಿಯಾಗಿದ್ದಾರೆ.

ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ(16) ಕೊಲೆಯಾದ ವಿದ್ಯಾರ್ಥಿ,ಬೆಳಗಾವಿಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ,ವಿದ್ಯಾರ್ಥಿಯ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆ‌ಯಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಅರೆ ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ.ಪತ್ತೆಯಾಗಿದೆ.
ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಭೇಟಿ ಪರಿಶೀಲನೆ‌ ನಡೆಸಿದ್ದಾರೆ.
ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *