Breaking News

ಬೆಳಗಾವಿ ಡಿಸಿಯಿಂದ, ಕ್ವಿಕ್ ರಿಸ್ಪಾನ್ಸ್.,ಮಕ್ಕಳ ಸಮಸ್ಯೆಗೆ ಸ್ಪಂದನೆ…

ಮಾಧ್ಯಮ ವರದಿಗಳ ಫಲಶ್ರುತಿ..

ಮುದನೂರ ಗ್ರಾಮದ ಶಾಲೆ ದುರಸ್ತಿ ಕಾಮಗಾರಿ ಇಂದಿನಿಂದಲೇ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ಮೇ 17(ಕರ್ನಾಟಕ ವಾರ್ತೆ): ರಾಮದುರ್ಗ ತಾಲ್ಲೂಕಿನ ಮುದನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರಸ್ತಿಗಾಗಿ 20 ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ.
ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಡಿ ಯೋಜನೆಯನ್ನು ಅಳವಡಿಸಿಕೊಂಡು ದುರಸ್ತಿ ಕಾಮಗಾರಿ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ 10 ಲಕ್ಷ ರೂಪಾಯಿ ತಾಲ್ಲೂಕು ಪಂಚಾಯತ 5 ಲಕ್ಷ ರೂಪಾಯಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ 5 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಹಶೀಲ್ದಾರ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಆರಂಭಿಸಿದ್ದಾರೆ.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಅವರು ಹಾಗೂ ತಾವು ಕಾಮಗಾರಿಯ ಕುರಿತು ನಿರಂತರವಾಗಿ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೆವೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
***

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *